ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli
ಅಪ್ರಾಪ್ತರಿಗೆ ಬೈಕ್ ಕೊಡಬಾರದು ಎಂದು ಹಲವು ಬಾರಿ ಎಚ್ಚರಿಕೆ ನೀಡಿದರೂ ಕೂಡ ಪೋಷಕರು ಎಚ್ಚೆತ್ತುಕೊಂಡಿಲ್ಲ. ಅಪ್ರಾಪ್ತರಿಗೆ ಬೈಕ್ ಕೊಟ್ಟರೆ 25 ಸಾವಿರಕ್ಕೂ ಹೆಚ್ಚು ದಂಡ ವಿಧಿಸಲಾಗುತ್ತದೆ.
ಇದೀಗ ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆಗೆ ಕೋರ್ಟ್ 25 ಸಾವಿರ ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಬೈಕ್ ಚಲಾಯಿಸಿದ 17 ವರ್ಷದ ಬಾಲಕ ತೀರ್ಥಹಳ್ಳಿಯವನು ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಟೌನ್ ದೊಡ್ಮನೆ ಕೇರಿ ಬಳಿ ಶಿವಮೊಗ್ಗ ಸಂಚಾರ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಬೈಕ್ ಚಲಾಯಿಸಿಕೊಂಡು ಬಂದ 17 ವರ್ಷದ ಬಾಲಕನನ್ನು ತಪಾಸಣೆ ನಡೆಸಿದಾಗ ಡಿಎಲ್ ಇಲ್ಲದಿರುವುದು ಹಾಗೂ ಆತ ಅಪ್ರಾಪ್ತ ಎಂಬುದು ಬಯಲಿಗೆ ಬಂದಿದೆ.
ಅಪ್ರಾಪ್ತ ಮಕ್ಕಳ ವಾಹನ ಚಾಲನೆ ಹಾಗೂ ಬೆಂಗಳೂರಿನ ರಸ್ತೆಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಸಂಚಾರಿ ಪೊಲೀಸರು ಪೋಷಕರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್