Breaking
12 Jan 2026, Mon

ಚುನಾವಣೆಯ ಠೇವಣಿ ಕಟ್ಟಲು ದೇಣಿಗೆ ಕೊಟ್ಟ ಗ್ರಾಮಸ್ಥರು – ಭಾವುಕರಾಗಿ ಕಣ್ಣೀರಿಟ್ಟ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ|Beluru

ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಹೆಬೈಲು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗ್ರಾಮಸ್ಥರು ದೇಣಿಗೆ ರೂಪದಲ್ಲಿ ಚುನಾವಣೆಗೆ ಠೇವಣಿ ಕಟ್ಟಲು ಹಣ ನೀಡಲು ಮುಂದಾದ ಸಂಧರ್ಭದಲ್ಲಿ ಬೇಳೂರು ಗೋಪಾಲಕೃಷ್ಣ ಭಾವುಕರಾದ ಘಟನೆ ನಡೆದಿದೆ.




ಹೆಬ್ಬೈಲು ಲೋಕಪ್ಪರವರ ಮನೆಯಲ್ಲಿ 2023ರ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಗೋಪಾಲಕೃಷ್ಣ ಬೇಳೂರು ಅಭಿಮಾನಿ ಬಳಗ ವಿಜಾಪುರ ಮತ್ತು ಮತ್ತಿಕೊಪ್ಪ ವತಿಯಿಂದ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರುರವರಿಗೆ ದೇಣಿಗೆ ರೂಪದಲ್ಲಿ ಠೇವಣಿಗೆ ಹಣ ನೀಡಿದರು.

ಅಭಿಮಾನಿಗಳು ಪ್ರೀತಿಯಿಂದ ನೀಡಿದ ಠೇವಣಿ ಹಣ ಸ್ವೀಕಾರ ಮಾಡಿದ ನಂತರ ಗೋಪಾಲಕೃಷ್ಣ ಬೇಳೂರುರವರು ಸ್ವಲ್ಪ ಕಾಲ ಭಾವುಕರಾದರು.


ನಂತರ ಮಾತನಾಡಿದ ಅವರು ನಿಮ್ಮ ಈ ಪ್ರೀತಿಯೇ ನನ್ನನ್ನು ಈ ಮಟ್ಟಿಗೆ ಬೆಳೆಸಿದೆ ನಿಮ್ಮಂತಹ ಅಭಿಮಾನಿಗಳನ್ನು ಪಡೆಯಲು ನಾನು ಪುಣ್ಯ ಮಾಡಿದ್ದೆ.ಈ ಚುನಾವಣೆಯಲ್ಲಿ ನಿಮ್ಮೆಲ್ಲಾರ ಹಾರೈಕೆಯಿಂದ ಗೆದ್ದು ಈ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿ ಮಾಡುವ ಮೂಲಕ ನಿಮ್ಮ ಋಣ ತೀರಿಸುತ್ತೇನೆ ಎಂದರು.

 ಮೊನ್ನೆ ಒಬ್ಬ ವ್ಯಕ್ತಿ ನನ್ನ ತೋಟವನ್ನು ಮಾರಿ ನಿಮಗೆ ಚುನಾವಣೆಗಾಗಿ ಹಣ ನೀಡುತ್ತೇನೆ ಎಂಬುದಾಗಿ ಘೋಷಣೆ ಮಾಡ್ದಿದನು. ಒಂದು ಎಕರೆ ತೋಟ ಮಾರಿ ಎಷ್ಟೇ ಆಗಲಿ ನೀಡುತ್ತೇನೆ ಎಂದಿದ್ದನು. ಇದು ನನ್ನ ಮೇಲೆ ಇಟ್ಟಿರುವಂತ ನಿಮ್ಮ ಪ್ರೀತಿ ಅಷ್ಟು ದೊಡ್ಡದು. ಆ ಋಣ ತೀರಿಸುವುದಕ್ಕೆ ಆಗುವುದಿಲ್ಲ. ಆ ಬಗ್ಗೆ ಜಾಸ್ತಿ ಮಾತನಾಡುವುದಿಲ್ಲ ಎಂದರು.




ನಿಮ್ಮ ಎಲ್ಲರ ಪ್ರೀತಿ, ವಿಶ್ವಾಸ ನನ್ನ ಮೇಲಿದೆ ಎಂಬುದಾಗಿ ನನಗೆ ಗೊತ್ತಿದೆ. ಆ ಪ್ರೀತಿ, ವಿಶ್ವಾಸವನ್ನು ವೋಟ್ ರೂಪದಲ್ಲಿ ವ್ಯಕ್ತಪಡಿಸಿ. ನಾನು ನಿಮ್ಮ ಋಣ ತೀರಿಸುವ ಕೆಲಸ ಮಾಡುವೆ. ಗೋಪಾಲಕೃಷ್ಣ ಬೇಳೂರು ಜನರನ್ನು ಬಿಟ್ಟು ದೂರ ಇರುವುದಿಲ್ಲ. ಜನರೊಂದಿಗೆ ಇರುತ್ತೇನೆ ಎಂದರು.

ಈಗಾಗಲೇ ಬಹಳಷ್ಟು ಜನ ನನಗೆ ದೇಣಿಗೆ ರೂಪದಲ್ಲಿ ಚುನಾವಣೆಗೆ ಹಣ ನೀಡುವುದಾಗಿ ತಿಳಿಸುತ್ತಿದ್ದಾರೆ. ಆ ಬೆಂಬಲ ಸಾಕು. ನಿಮ್ಮ ಸಂಪೂರ್ಣ ಬೆಂಬಲ ನನ್ನ ಮೇಲೆ ಇರಲಿ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ , ಮಾರುತಿಪುರ ಗ್ರಾಪಂ ಅಧ್ಯಕ್ಷ ಪಿ ಚಿದಂಬರಂ ,ಸಣ್ಣಕ್ಕಿ ಮಂಜು ಹಾಗೂ ಇನ್ನಿತರರಿದ್ದರು.



About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *