ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ | Kenchanala – jathre
ರಿಪ್ಪನ್ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು.
ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಶ್ರೀ ಮಾರಿಕಾಂಬ ಜಾತ್ರೆ ನಡೆಯುತ್ತದೆ.
ಉತ್ತಮ ಆರೋಗ್ಯ ರೋಗ-ರುಜಿನಗಳು ಬರದಂತೆ. ತಾವು ಬೆಳೆದ ಕೃಷಿ ಮತ್ತು ಕೃಷಿ ಉತ್ಪನ್ನಗಳು. ಸಾಕು ಪ್ರಾಣಿಗಳ ಸಂರಕ್ಷಣೆ. ಮಕ್ಕಳಾಗದಿದ್ದರೆ ಮಕ್ಕಳಾಗುವ ಬಗ್ಗೆ ತಮ್ಮ ಇಷ್ಟಾರ್ಥಗಳು ನೆರವೇರಲಿ ಎಂದು ಭಕ್ತರು ಹರಕೆಯನ್ನು ಹೊರುತ್ತಾರೆ. ಮಾರಿಕಾಂಬ ದೇವಿಯ ದರ್ಶನದಿಂದ ಲಕ್ಷಾಂತರ ಜನರು ಒಳಿತನ್ನು ಕಂಡಿದ್ದಾರೆ, ಕಾಣುತ್ತಲೂ ಇದ್ದಾರೆ.
ಈ ಸಂಧರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ,ದೇವಸ್ಥಾನ ಸಮಿತಿ ಅಧ್ಯಕ್ಷರು,ಸದಸ್ಯರು, ಮುಜರಾಯಿ ಇಲಾಖೆ ಅಧಿಕಾರಿಗಳು , ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಇದ್ದರು.
ರಕ್ಷಣ ಇಲಾಖೆಯ ರಿಪ್ಪನ್ಪೇಟೆ ಪಿಎಸ್ ಐ ಎಸ್ ಪಿ ಪ್ರವೀಣ್ ಹಾಗೂ ಸಿಬ್ಬಂದಿಗಳು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿದರು.