ಮಾರಿ ಜಾತ್ರೆಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ಹಾಡಹಗಲೇ ನಗ – ನಗದು ಅಪಹರಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗ ಸಮೀಪ ನಡೆದಿದೆ.
ಶಿವವಮೊಗ್ಗ-ಸಾಗರ ಹೆದ್ದಾರಿಯಲ್ಲಿ ಬರುವ ಟ್ರೀಪಾರ್ಕ್ನ ಸಮೀಪ ದರೋಡೆಯೊಂದು (Dacoity) ನಡೆದಿರುವ ಬಗ್ಗೆ ವರದಿಯಾಗಿದೆ. ತರಿಕೆರೆಯ ವಸಂತ್ ಎಂಬವರು ಕಾರಿನಲ್ಲಿ ಮಾರಿಜಾತ್ರೆಗೆ ಹೋಗುತ್ತಿದ್ದ ವೇಳೆ ಅವರನ್ನು ಟ್ರೀಪಾರ್ಕ್ ಬಳಿ ಅಡ್ಡಗಟ್ಟಲಾಗಿದೆ. ಕಾರಿನಲ್ಲಿ ಹೋಗುತ್ತಿದ್ದವರನ್ನ ತಡೆದು ಕುತ್ತಿಗೆಗೆ ಮಚ್ಚು ಹಿಡಿದು ಕ್ಯಾಶ್ ಹಾಗೂ ಚಿನ್ನವನ್ನು ದೋಚಿ ಹೋಗಿದ್ದಾರೆ.
ಮೂತ್ರ ವಿಸರ್ಜನೆಗೆ ಎಂದು ಕಾರು ನಿಲ್ಲಿಸಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಮೂತ್ರ ವಿಸರ್ಜನೆ ಮುಗಿಸಿ ವಾಪಸ್ ಕಾರು ಹತ್ತುವಾಗ ಅಲ್ಲಿಗೆ ಡಿಯೋ ಬೈಕ್ನಲ್ಲಿ ಬಂದ ಇಬ್ಬರು ವಸಂತ್ರನ್ನ ಮಚ್ಚು ತೋರಿಸಿ ಹೆದರಿಸಿದ್ದಾರೆ. ಬಳಿಕ ಅಲ್ಲಿಂದ ಸಾಗರ ಕಡೆಗೆ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಸ್ಟೇಷನ್ನಲ್ಲಿ ಕೇಸ್ ಆಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಕುಂಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.