Breaking
12 Jan 2026, Mon

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ

ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್‌ಐ ನಿಂಗರಾಜ್ ಕೆ ವೈ


ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್‌ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್‌ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು.


ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಟ್ಟಣದ ಗ್ರಾಮ ಪಂಚಾಯತ್ ವತಿಯಿಂದ ನಾಗರೀಕ ಸನ್ಮಾನ ಮಾಡಲಾಯಿತು.ಇದೇ ಸಂಧರ್ಭದಲ್ಲಿ ವಿವಿಧ ಪಕ್ಷಗಳ ಮುಖಂಡರು ಪಿಎಸ್‌ಐ ರವರನ್ನು ಸನ್ಮಾನಿಸಿ ಬೀಳ್ಕೊಟ್ಟರು.


ಸನ್ಮಾನ ಸ್ವೀಕರಿಸಿ ಮಾತನಾಡಿದ ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಬರುವ ಮುನ್ನ ಇಲ್ಲಿನ ಜನತೆ ವಿಭಿನ್ನ, ಕರ್ತವ್ಯ ಮಾಡುವುದು ಹೇಗೆ ಎಂಬ ಬಗ್ಗೆ ಸಾಕಷ್ಟು ಗೊಂದಲವಿತ್ತು. ಆದರೆ, ನನಗೆ ಈಗ ಬಿಟ್ಟು ಹೋಗುವುದು ಹೇಗೆ ಎಂಬಂತಾಗಿದೆ ಎಲ್ಲರೂ ನಮಗೆ ಸಹಕಾರ ನೀಡಿದ್ದಾರೆ. ಠಾಣೆಗೆ ವರ್ಗಾವಣೆಯಾಗಿ ಬಂದ ಕೆಲವೇ ದಿನಗಳಲ್ಲಿ ಹುಂಚ ಮುತ್ತಿನಕೆರೆಯ ಕೊಲೆ ಪ್ರಕರಣ ಸವಾಲಾಗಿತ್ತು ಆದರೆ ನಮ್ಮ ಸಿಬ್ಬಂದಿಗಳ ಸಹಕಾರದಿಂದ ಆರೋಪಿಯನ್ನು ಪತ್ತೆ ಮಾಡಲಾಗಿತ್ತು. ಇನ್ನೂ ಈ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶವಾದ ಕೆಂಚನಾಲ ಮತ್ತು ಕೋಡೂರು ಗ್ರಾಮದಲ್ಲಿ ಸಿಸಿ ಟಿವಿ ಅಳವಡಿಸಿ ಕಣ್ಗಾವಲಿನಲ್ಲಿರಿಸಲಾಗಿತ್ತು ಅಲ್ಲದೆ ಕೆಂಚನಾಲಕ್ಕೆ ಮುಂಜಾನೆ ಸೈಕಲ್ ಮೂಲಕ ಮಫ್ತಿಯಲ್ಲಿ ಹೋಗಿ ಅಲ್ಲಿನ ಜನರ ಬಳಿ ಸಾಕಷ್ಟು ಚರ್ಚಿಸಿ ಕೊನೆಗೆ ಅವರುಗಳೇ ಪೊಲೀಸ್ ಇನ್ಸ್‌ಪೆಕ್ಟರ್ ಎಂದು ಹೇಳಿ ಮಾತನಾಡುತ್ತಿದ್ದು ಈ ರೀತಿಯಲ್ಲಿ ಜನಮೆಚ್ಚುಗೆ ಗಳಿಸಲು ಸಾಧ್ಯವಾಗಿದೆ ಎಂದು ತಮ್ಮ ನಾಲ್ಕು ತಿಂಗಳಲ್ಲಿ ಸಾಕಷ್ಟು ಅನುಭವವನ್ನು ತಮ್ಮೂರಿನಲ್ಲಿ ಕಲಿಯುವ ಅವಕಾಶ ಕಲ್ಪಿಸಿದ್ದೀರಿ’ ಎಂದು ನಿರ್ಗಮಿತ ಪಿಎಸ್‌ಐ ಕೆ.ವೈ.ನಿಂಗರಾಜ್ ಹೇಳಿದರು.


ಈ ಸಂಧರ್ಭದಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಪ್ರಮುಖರಾದ ಆರ್.ಎ.ಚಾಬುಸಾಬ್, ಎಂ.ಬಿ.ಮಂಜುನಾಥ, ಎಂ. ಸುರೇಶ್‌ಸಿಂಗ್, ಆರ್.ರಾಘವೇಂದ್ರ, ಟಿ.ಆರ್.ಕೃಷ್ಣಪ್ಪ,ರವೀಂದ್ರ ಕೆರೆಹಳ್ಳಿ ಗ್ರಾಪಂ ಸದಸ್ಯರಾದ ಸುಂದರೇಶ್, ಆಸೀಫ಼್ ಭಾಷಾ, ನಿರೂಪ್ ಕುಮಾರ್ , ಗಣಪತಿ ಗವಟೂರು ,ಸಾರಾಭಿ , ಪಿಡಿಓ ಮಧುಸೂಧನ್, ಶ್ರೀಧರ, ರಮೇಶ್ ಫ್ಯಾನ್ಸಿ, ಕೆ.ಎನ್.ರಾಜಶೇಖರ್ ಕಮದೂರು ಹಾಗೂ ಪೊಲೀಸ್ ಠಾಣೆಯ ಸಿಬ್ಬಂದಿವರ್ಗ ಸೇರಿದಂತೆ ಇನ್ನಿತರರು ಇದ್ದರು.


About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *