Headlines

ರಿಪ್ಪನ್‌ಪೇಟೆ : ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|tammadikoppa

ರಿಪ್ಪನ್‌ಪೇಟೆ;-ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಹೊಟ್ಯಾಳಪುರದಲ್ಲಿ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಜಾಗ ಇಲ್ಲದೆ ಗ್ರಾಮಸ್ಥರು ಊರ ಬಳಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕವಾಗಿ ಸೆಡ್ ನಿರ್ಮಿಸಿಲಾಗಿ ಅರಣ್ಯ ಇಲಾಖೆಯವರು ತೆರವುಗೊಳಿಸಲು ಮುಂದಾದಾಗ ಪ್ರತಿಭಟನೆ ನಡೆಸಲಾಗಿದ್ದು ಶಾಸಕರ ಗಮನಕ್ಕೆ ತರಲಾಗಿ ಭಾನುವಾರದಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಸ್ಥರ ಬೇಡಿಕೆಯಂತೆ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡುವುದರೊಂದಿಗೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ 40* 50 ಅಳತೆಯ ಜಾಗ ಬಿಡುವಂತೆ ಸೂಚಸಿದರು.

ಈ ಸಂದರ್ಭದಲ್ಲಿ ತಾಲ್ಲೂಕ್ ಶಿಶು ಕಲ್ಯಾಣಾಭಿವೃದ್ದಿ ಇಲಾಖೆಯ ಅಧಿಕಾರಿ ಶಶಿರೇಖಾ, ಗ್ರಾ.ಪಂ.ಪಿಡಿಓ ಗಣೇಶ ಹೊಸನಗರ ತಾಲ್ಲೂಕ್ ಅಂಗನವಾಡಿ ಕಾರ್ಯಕತೆಯರ ಯುನಿಯನ್ ಅಧ್ಯಕ್ಷೆ ಶೀಲಾ ಗಂಗನಾಯ್ಕ್,ಅಂಗನವಾಡಿ ಮೇಲ್ವಿಚಾರಕಿ ವಿಜಯಮ್ಮ,ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ,ಆರ್.ಟಿ.ಗೋಪಾಲ ತಮ್ಮಡಿಕೊಪ್ಪ ಲೋಕೇಶ್,ಪಿ.ರಮೇಶ್,ಮೆಣಸೆ ಆನಂದ,ಇನ್ನಿತರ ಗ್ರಾಮಸ್ಥರು ಹಾಜರಿದ್ದರು.

About The Author

Leave a Reply

Your email address will not be published. Required fields are marked *