ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಅನ್ವರ್ ಕಾಲೋನಿ ನಿವಾಸಿ ಜಮೀರ್(19) ಎರಡು ದಿನಗಳ ಹಿಂದ ಎಲೆಕ್ಟ್ರಿಕಲ್ ಕೆಲಸಕ್ಕೆ ತೆರಳಿದ್ದ ಆದರೆ ಇಂದು ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಅನ್ವರ್ ಕಾಲೋನಿಯ ಜಮೀರ್ ಮೊನ್ನೆ ಟಿವಿ ರಿಪೇರಿಗಾಗಿ ದೇವನರಸೀಪುರ ಗ್ರಾಮಕ್ಕೆ ಹೋಗಿದ್ದ ನಂತರ ಆತನ ಮೊಬೈಲ್ ಸ್ವಿಚ್ ಆಫ಼್ ಆಗಿತ್ತು. ಆತನ ಮೊಬೈಲ್ ಸ್ವಿಚ್ ಆಫ್ ಆದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಗಾಬರಿಗೊಂಡು ಹೊಸಮನೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಇಂದು ಜಮೀರ್ ನ ಮೃತ ದೇಹ ಗುಂಡಪ್ಪಶೆಡ್ ಬಳಿಯ ಭದ್ರಾ ನದಿಯಲ್ಲಿ ದೊರೆಕಿದೆ.ಜಮೀರ್ ನ ಮೃತದೇಹ ಪತ್ತೆಯಾಗಿರುವ ಹಿನ್ನಲೆಯಲ್ಲಿ ಆತನ ಕುಟುಂಬಸ್ಥರು ಜಮೀರ್ ನನ್ನು ಕೊಲೆ ಮಾಡಲಾಗಿದೆ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ.
ಆತನ ಮೃತ ದೇಹ ಶಿವಮೊಗ್ಗ ಮರುಣೋತ್ತರ ಪರೀಕ್ಷೆಗೆ ಕರೆತರುವ ಸಾಧ್ಯತೆ ಇದೆ.ಹೆಚ್ಚಿನಮಾಹಿತಿ ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಳ್ಳಬೇಕಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್