ಶಿವಮೊಗ್ಗ: ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ತಾನು ಇವತ್ತು ರಾಜಿನಾಮೆ ನೀಡುತ್ತಿರುವುದಾಗಿ ಸೊರಬ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ರಾಜು ತಲ್ಲೂರು ಘೋಷಿಸಿದ್ದಾರೆ.
ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಸಂಪೂರ್ಣ ನಿಷ್ಕ್ರಿಯ ರಾಗಿದ್ದಾರೆ. ಜಿಲ್ಲೆಯಲ್ಲಿ ಅವರಿಂದ ಪಕ್ಷ ಚೇತರಿಕೆ ಕಾಣದು. ವ್ಯಕ್ತಿಪೂಜೆಯಲ್ಲಿ ಅವರು ನಿರತರಾಗಿದ್ದಾರೆ. ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಿಲ್ಲ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸಿನಲ್ಲಿ ಒಗ್ಗಟ್ಟಿಲ್ಲ. ಈ ಬಗ್ಗೆ ರಾಜ್ಯದ ಮುಖಂಡರಿಗೆ ಮಾಹಿತಿ ನೀಡಿದ್ದೆ. ಕೆಲಸ ಮಾಡಲು ಮನಸ್ಸಿಲ್ಲದವರು ಪಕ್ಷದಲ್ಲಿದ್ದಾರೆ. ಇದರಿಂದ ನಿಷ್ಕ್ರಿಯ ಪಕ್ಷದಲ್ಲಿರಬಾರದೆಂದು ತೀರ್ಮಾನಿಸಿ ಕಾಂಗ್ರೆಸ್ ತ್ಯಜಿಸುತ್ತಿರುವುದಾಗಿ ವಿವರಿಸಿದರು.
ಮುಂದೆ ಯಾವ ಪಕ್ಷವನ್ನು ಸೇರಬೇಕೆಂದು ಇನ್ನೆರಡು ದಿನದಲ್ಲಿ ನಿರ್ಧರಿಸುತ್ತೇನೆ. ತನ್ನ ಬೆಂಬಲಿಗರೊಂದಿಗೆ ಈಗಾಗಲೆ ಕಾಂಗ್ರೆಸ್ ಬಿಡುವ ಬಗ್ಗೆ ಮಾತನಾಡಿದ್ದೇನೆ. ಬಿಜೆಪಿ ಸೇರುವ ಬಗ್ಗೆ ತೀರ್ಮಾನಿಸಲಾಗುವುದು ಎಂದರು.