ಹುಂಚಾ : ಇಲ್ಲಿನ ಸಮೀಪದ ವಾರಂಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳು, ಮಹಿಳೆಯರು, ಊರಿನ ಹಿರಿ-ಕಿರಿಯ ನಾಗರೀಕರು ಒಗ್ಗಟ್ಟಾಗಿ ಶಾಸಕ ಹಾಗೂ ಎಲ್ಲಾ ಜನಪ್ರತಿನಿಧಿಗಳ ವಿರುದ್ದ ಧಿಕ್ಕಾರ ಕೂಗಿದ ಘಟನೆ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ವಾರಂಬಳ್ಳಿ, ನಿವಣೆ ಸಮೀಪ ನಡೆದಿದೆ.
ತೀರ್ಥಹಳ್ಳಿ – ಹೊಸನಗರ ತಾಲ್ಲೂಕಿನ ಗಡಿ ಭಾಗದ ವಾರಂಬಳ್ಳಿ, ನಿವಣೆ, ಗೊರಗೋಡು, ಜಯನಗರ, ಹೇರಗಲ್ಲು, ಕೊಳಗಿ, ಗೊರದಳ್ಳಿ, ಅಲಗಾರು, ಹುಣಸೆಮಕ್ಕಿ ಗ್ರಾಮಸ್ಥರು ಅಡಿಕೆ, ಬಾಳೆ ಸಸಿ, ಭತ್ತದ ಸಸಿಗಳನ್ನು ಕೆಸರಿನಿಂದ ಮುಚ್ಚಿಕೊಂಡಿರುವ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ವಿಶೇಷವಾಗಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿನಿತ್ಯ ಈ ಭಾಗದಲ್ಲಿ 100ಕ್ಕೂ ಹೆಚ್ಚು ವಾಹನಗಳು ಓಡಾಡುತ್ತಿದ್ದು ಗ್ರಾಮದ ಸಂಪರ್ಕ ಕೊಂಡಿಯಾಗಿದೆ. ಎಷ್ಟೇ ಮನವಿ ನೀಡಿದರು ರಸ್ತೆ ಅಭಿವೃದ್ದಿ ಆಗುತ್ತಿಲ್ಲ.ಕ್ಷೇತ್ರದ ಶಾಸಕರು ಹಾಗೂ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರನ್ನು ವಿಚಾರಿಸಿದರೆ ನಿಮ್ಮ ರಸ್ತೆ ಸದ್ಯದಲ್ಲೇ ಮಾಡಿಸಿಕೊಡುತ್ತೇನೆ ಎಂದು ಸಮಜಾಯಿಷಿ ನೀಡುತ್ತಿದ್ದಾರೆ. ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ಸ್ವಾತಂತ್ರ್ಯ ಲಭಿಸಿ 75ನೇ ವರ್ಷದ ಅಮೃತ ಮಹೋತ್ಸವವನ್ನು ವಿಜೃಂಬಣೆಯಿಂದ ಆಚರಿಸಿದ್ದೇವೆ. ಆದರೆ ಗ್ರಾಮೀಣ ಪ್ರದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿಲ್ಲ. ನಾಲ್ಕು ವರ್ಷಗಳ ಹಿಂದೆ ನೆಟ್ವರ್ಕ್ ಸಮಸ್ಯೆ ಎಂದು ಪತ್ರ ಬರೆದಿದ್ದಾಗಲು ಇಂತಹದ್ದೇ ತಾತ್ಸಾರದ ಉತ್ತರಗಳು ಸಿಕ್ಕಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್