Breaking
12 Jan 2026, Mon

ರಿಪ್ಪನ್‌ಪೇಟೆ : ದಂಡದ ಬದಲು ಇನ್ಸೂರೆನ್ಸ್ ಮಾಡಿಸಿದ ಪೊಲೀಸರು

ರಿಪ್ಪನ್‌ಪೇಟೆ :  ಇಂದು ಪಟ್ಟಣದ ಪೊಲೀಸರು ಬೈಕ್ ಸವಾರರಿಗೆ ಅವಶ್ಯಕ ದಾಖಲೆಗಳ ಬಗ್ಗೆ ವಿನೂತನವಾಗಿ ಚುರುಕು ಮುಟ್ಟಿಸುವ ಕಾರ್ಯಾಚರಣೆ ನಡೆಸಿದ್ದಾರೆ.


ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದ ತಂಡ ಇಂದು ಪಟ್ಟಣದಲ್ಲಿ ವಾಹನಗಳನ್ನು ತಡೆ ಹಿಡಿದು ಸಾವಿರ ದಂಡ ಕಟ್ಟುವ ಬದಲು ಸಾವಿರ ರೂಪಾಯಿಯಲ್ಲೇ ಇನ್ಸೂರೆನ್ಸ್ ಮಾಡಿಸಿ ಎಂದು ಸವಾರರಿಗೆ ಬುದ್ದಿ ಹೇಳಿ ಸ್ಥಳದಲ್ಲಿಯೇ ಇನ್ಸೂರೆನ್ಸ್ ಹಾಕಿಸಿ ಕಳುಹಿಸುತ್ತಿದ್ದ ದೃಶ್ಯ ಕಂಡುಬಂದಿತ್ತು.

ಪೊಲೀಸರು ವಾಹನ ಅಡ್ಡ ಹಾಕಿದ್ರೆ ಸಾಕು, ಲೈಸೆನ್ಸ್ ಎಲ್ಲಿ, ಆರ್.ಸಿ. ಕೊಡು, ಎಮಿಷನ್ ಮಾಡಿಸಿಲ್ವ, ಇನ್ಸೂರೆನ್ಸ್ ಕಾಪಿ ಎಲ್ಲಿ ಅನ್ನುತ್ತಾರೆ. ಯಾವುದಾದರೊಂದು ದಾಖಲೆ ಇಲ್ಲ ಅಂದ್ರೆ ದಂಡ ಬೀಳುವುದು ಗ್ಯಾರಂಟಿ. ಹಾಗಂತ ಇದರಲ್ಲಿ ಪೊಲೀಸರ ತಪ್ಪೇನಿಲ್ಲ. ವಾಹನ ಓಡಿಸುವ ಸಂದರ್ಭದಲ್ಲಿ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ. ಅದರಲ್ಲೂ ವಾಹನಕ್ಕೆ ಇನ್ಸೂರೆನ್ಸ್ ಮಾಡಿಸಿಕೊಳ್ಳುವುದು ಇನ್ನೂ ಕಡ್ಡಾಯ. ಯಾವ ಕ್ಷಣದಲ್ಲಿ ಏನೂ ಬೇಕಾದರೂ ಸಂಭವಿಸಬಹುದು ಹಾಗಾಗಿ ಇನ್ಸೂರೆನ್ಸ್ ಬೇಕೇ ಬೇಕು.

ಹಾಗಂತ ಅದೆಷ್ಟು ಮಂದಿ ಇನ್ಸೂರೆನ್ಸ್ ಮಾಡಿಸಿಕೊಂಡಿದ್ದಾರೆ ಹೇಳಿ!!!!. ಕಳೆದ ವರ್ಷ ಇನ್ಸೂರೆನ್ಸ್ ಕಟ್ಟಿದ್ದೇವೆ, ಕೈಯಿಂದ ಕಾಸು ಹೋಯ್ತು ಬಿಟ್ರೆ ಮತ್ತೇನೂ ಆಗಿಲ್ಲ ಅನ್ನುವ ಉಡಾಫೆ ಮಾತು ಆಡುವವರೇ ಹೆಚ್ಚು. ಯಾಕಂದ್ರೆ ಅವರಿಗೆ ಇನ್ಸೂರೆನ್ಸ್ ಬಗ್ಗೆ ಮಾಹಿತಿಯೇ ಇರುವುದಿಲ್ಲ.


ಇಂತಹ ವಾಹನ ಸವಾರರಿಗೆ ಪಾಠ ಕಲಿಸಲು ಮುಂದಾಗಿರುವ ರಿಪ್ಪನ್‌ಪೇಟೆ ಪೊಲೀಸರು ವಿಶಿಷ್ಟ ಇನ್ಸೂರೆನ್ಸ್ ಡ್ರೈವ್ ಒಂದನ್ನು ಪ್ರಾರಂಭಿಸಿದ್ದಾರೆ. ತಪಾಸಣೆ ಸಲುವಾಗಿ ವಾಹನಗಳನ್ನು ಹಿಡಿದಾಗ ಇನ್ಸೂರೆನ್ಸ್ ಇಲ್ಲ ಅನ್ನುವುದು ಗೊತ್ತಾದ್ರೆ ಸ್ಥಳದಲ್ಲೇ ಇನ್ಸೂರೆನ್ಸ್ ಮಾಡಿಸುವುದರ ಮೂಲಕ‌ ಮೋಟಾರು ವಾಹನಗಳ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಿರುವುದು ವಿಶೇಷವಾಗಿದೆ.



ಒಟ್ಟಾರೆಯಾಗಿ ರಿಪ್ಪನ್‌ಪೇಟೆ ಪೊಲೀಸರ ಇಂದಿನ ಕಾರ್ಯಾಚರಣೆ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.



About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *