ಹೊಸನಗರ : ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಗೋ ಸೇವೆ, ಜಾಗೃತಿ ಮತ್ತು ಗೋ ಸಂರಕ್ಷಣೆಯನ್ನು ತಪಸ್ಸಿನ ರೀತಿಯಲ್ಲಿ ಮಾಡಿದ್ದಾರೆ,ನಮ್ಮ ಸರ್ಕಾರವೂ ಸಹ ಗೋವಿನ ರಕ್ಷಣೆಗೆ ಬದ್ದವಾಗಿದೆ, ಮತ್ತು ಈ ಗೋವಿನ ಹತ್ಯೆ ಮಾಡುವವರ ವಿರುದ್ಧ ಕಠಿಣ ಕಾನೂನಿನ ಕ್ರಮವನ್ನು ಜರುಗಿಸುತ್ತಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.
ಈ ಪುಣ್ಯ ಕ್ಷೇತ್ರದಲ್ಲಿ ಅತ್ಯಂತ ಸುಂದರವಾಗಿ ವಾಸ್ತು ಶಿಲ್ಪದ ಮೂಲಕ ನಿರ್ಮಾಣವಾಗಿರುವ ಶ್ರೀ ಚಂದ್ರಮೌಳೀಶ್ವರ ದೇವರ ಭವ್ಯ ದೇವಾಲಯ ನಿರ್ಮಾಣವಾಗಿ ಇಂದು ಧ್ವಜ ಸ್ತoಭದ ಪ್ರತೀಷ್ಠಾಪನ ಕಾರ್ಯವಾಗಿದೆ ಮುಂದಿನ ದಿನದಲ್ಲಿ ಸುಕ್ಷೇತ್ರವಾಗಿ ಹೊರಹೊಮ್ಮಲಿದೆ ಇಲ್ಲಿ ಸೇವೆ ಸಲ್ಲಿಸುವ ಅವಕಾಶ ನನಗೆ ಕಲ್ಪಿಸಿದ ಇಲ್ಲಿನ ಜನತೆ ಮತ್ತು ಶ್ರೀಗಳಿಗೆ ನನ್ನ ನಮನಗಳು ಎಂದು ತಿಳಿಸಿದರು.
ಹೊಸನಗರ ತಾಲೂಕಿನ ಶ್ರೀ ರಾಮಚಂದ್ರಾ ಪುರಮಠದ ಶ್ರೀ ಚಂದ್ರಮೌಳೀಶ್ವರ ದೇವಾಲಯದ ಶ್ರೀದೇವರ ಧ್ವಜ ಸ್ತoಭ ಪ್ರತೀಷ್ಠಾ ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಭಾಗವಹಿಸಿ ಮಾತನಾಡಿದರು.
ಹೊರನಾಡು ಕ್ಷೇತ್ರದ ಧರ್ಮದರ್ಶಿಗಳಾದ ಡಾ.ಭೀಮೇಶ್ವರ ಜೋಶಿ, ಶಾಸಕರಾದ ಹರತಾಳು ಹಾಲಪ್ಪ,ಸಿಗಂದೂರು ಪ್ರಧಾನ ಅರ್ಚಕರಾದ ಶೇಷಗಿರಿ ಭಟ್,
ಹಟ್ಟಿಅಂಗಡಿಯ ಪ್ರಧಾನ ಅರ್ಚಕರಾದ ಬಾಲಚಂದ್ರ ಭಟ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗುರುಮೂರ್ತಿ, ಆರ್. ಎಸ್ ಹೆಗಡೆ, ಪ್ರಭಾಕರ್ ವಿಷ್ಣು ಕುಚುಕಾಡು ಮತ್ತಿತರರು ಉಪಸ್ಥಿತರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್