ರಿಪ್ಪನ್ ಪೇಟೆ ನಾಡಕಚೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಂಚನಾಲ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವರ್ಷಿಣಿ ರವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಕೆಂಚನಾಲ ಗ್ರಾಮ ಪಂಚಾಯಿತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ವರ್ಷಿಣಿ ರವರು ಕಳೆದ 6 ವರ್ಷಗಳಿಂದ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಲೆಕ್ಕಿಗರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಗ್ರಾಮಕ್ಕೆ ವರ್ಗಾವಣೆಗೊಂಡಿದ್ದಾರೆ.
ಇವರ ಅನುಪಮ ಸೇವೆ ಹಾಗೂ ಕರ್ತವ್ಯಕ್ಕೆ ಗೌರವಸೂಚಕವಾಗಿ ಇಲ್ಲಿನ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಅಧಿಕಾರಿ ವರ್ಗದವರು ಇಂದು ವರ್ಷಿಣಿ ರವರಿಗೆ ಸನ್ಮಾನಿಸಿ ಗೌರವಯುತವಾಗಿ ಬೀಳ್ಕೊಟ್ಟಿದ್ದಾರೆ.
ಈ ಸಂದರ್ಭದಲ್ಲಿ ಕೆಂಚನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಬೇದುಲ್ಲಾ ಶರೀಫ್ ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಕುಮಾರ್, ಗ್ರಾಪಂ ಪಂಚಾಯತ್ ಕಾರ್ಯದರ್ಶಿ ಶಿವಪ್ರಸಾದ್, ಸಿಬ್ಬಂದಿಗಳಾದ ಗೀತಮ್ಮ, ಲೋಹಿತ್, ಮಂಜಣ್ಣ, ಸುರೇಶ್, ಫೈರೋಜ್, ಮಲ್ಲಿಕಪ್ಪ ಹಾಗೂ ನಯಾಜ್ ಉಪಸ್ಥಿತರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್