Headlines

ಶಿವಮೊಗ್ಗದ ಸೂಳೆಬೈಲಿನಲ್ಲಿ ಕಾರಿನ ಗಾಜು ಒಡೆದ ಪ್ರಕರಣ : ಒಬ್ಬ ಆರೋಪಿ ಅರೆಸ್ಟ್ : ಎಸ್ ಪಿ ಲಕ್ಷ್ಮಿಪ್ರಸಾದ್

ನಿನ್ನೆ ರಾತ್ರಿ ಶಿವಮೊಗ್ಗದ ಸೂಳೆಬೈಲಿನಲ್ಲಿ ಕಾರಿನ ಗಾಜು ಒಡೆದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನ ಬಂಧಿಸಲಾಗಿದೆ ಎಂದು ಎಸ್​ಪಿ ಲಕ್ಷ್ಮೀಪ್ರಸಾದ್​ ಹೇಳಿಕೆ ನೀಡಿದ್ದಾರೆ. 

 ನಿನ್ನೆ ರಾತ್ರಿ ಬೈಕಲ್ಲಿ ಕಾರನ್ನು ಹಿಂಬಾಲಿಸಿ ರಾಡಿನಿಂದ ಕಾರಿನ ಹಿಂಬದಿ ಗಾಜು ಒಡೆದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನ ಗುರುತಿಸಲಾಗಿದ್ದು, ಓರ್ವ ಆರೋಪಿ ಅಜ್ಗರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.


ರಸ್ತೆ ಕಿರಿಯದಾಗಿದ್ದು ನಿಧಾನವಾಗಿ ಕಾರು ಚಲಿಸುತ್ತಿತ್ತು. ಈ ವೇಳೆ ಬೈಕ್​ನಲ್ಲಿ ಬಂದ ಇಬ್ಬರು  ಕಾರಿನ ಹಿಂಬದಿ ಗಾಜು ಒಡೆದಿದ್ದಾರೆ. ಕುಡಿದ ಅಮಲಿನಲ್ಲಿ ಈ ಕೃತ್ಯವೆಸಗಿರಬಹುದು ಹಾಗೂ ಗಾಂಜಾ ಸೇವನೆ ಮಾಡಿದ್ದರ ಇಲ್ಲವೇ ಎನ್ನುವುದರ ಬಗ್ಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರೇ ಸುಮೊಟೋ ಕೇಸ್​ ದಾಖಲಿಸಿಕೊಂಡಿದ್ದಾರೆ. ಇನ್ನೂ ಆರೋಪಿಗಳ ಪೈಕಿ ಬೈಕ್​ ಚಾಲನೆ ಮಾಡುತ್ತಿದ್ದವನನ್ನ ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿಗಾಗಿ ಬಲೆ ಬೀಸಲಾಗಿದೆ. ಇವರಿಬ್ಬರ ಪೈಕಿ ಓರ್ವನ ಮೇಲೆ ಗಾಂಜಾ ಕೇಸ್​ ಕೂಡ ಈ ಹಿಂದೆ ದಾಖಲಾಗಿತ್ತು ಎಂದು ತಿಳಿಸಿದ್ದಾರೆ. 

Leave a Reply

Your email address will not be published. Required fields are marked *