Headlines

ಸಾಲಬಾಧೆಗೆ ಹೆದರಿ ಬ್ಲೇಡ್ ನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ :

ಶಿವಮೊಗ್ಗ : ಬ್ಲೇಡ್ ನಿಂದ ಕೈಕೊಯ್ದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ನೆಹರೂ ರಸ್ತೆಯ ಖಾಸಗಿ ಲಾಡ್ಜ್ ನಲ್ಲಿ  ಈ ಘಟನೆ ನಡೆದಿದೆ.

 ಈ ಯುವಕನ ಸಾವಿನ ಆಯ್ಕೆ ಬಹುತೇಕ ಅಚ್ಚರಿ ಮೂಡಿಸಿದೆ. ಕೈಯ್ಯನ ಬ್ಲೇಡ್ ನಿಂದ ಕೊಯ್ದುಕೊಂಡ ಕಾರಣ ಟಾಯ್ಲೆಟ್ ಎಲ್ಲಾ ರಕ್ತಸಿಕ್ತವಾಗಿದೆ. ಸಾಲಬಾಧೆಯೇ ಆತನ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ.

ಮೃತ ವ್ಯಕ್ತಿಯು ಬೆಂಗಳೂರು ನಿವಾಸಿ ನಾಗೇಂದ್ರ ಎಂದು ತಿಳಿದುಬಂದಿದೆ.


 ಏ. 28 ರ ಬೆಳಿಗ್ಗೆ 5-30 ಕ್ಕೆ ಲಾಡ್ಜ್ ನಲ್ಲಿ ಚೆಕ್ ಇನ್ ಆದ ನಾಗೇಂದ್ರ ಅಂದು ಸಂಜೆಯೇ ಬ್ಲೇಡ್ ನಿಂದ ಕೈ ಕೊಯ್ದುಕೊಂಡಿದ್ದಾನೆ. ಅಂದು ರಾತ್ರಿ ಯಾರಿಗೂ ಏನು ಈ ವಿಷಯ ತಿಳಿದಿಲ್ಲ. ಆದರೆ ಏ.28 ರ ಮಧ್ಯಾಹ್ನ ಹೊರಗಡೆಯಿಂದ ಊಟ ತಂದು ಮಾಡಿದ್ದಾನೆ.

ಇಂದು ಬೆಳಿಗ್ಗಿನ ಜಾವ ಲಾಡ್ಜ್ ನವರು ಎಲ್ಲರನ್ನೂ ಬಿಸಿನೀರಿಗಾಗಿ ಎಬ್ಬಿಸಿದ್ದಾರೆ. ಆದರೆ ನಾಗೇಂದ್ರ ಎದ್ದಿಲ್ಲ. ನಂತರ ನಿಧಾನವಾಗಿ ಈ ರೂಮಿನಿಂದ ಕೆಟ್ಟ ವಾಸನೆ ಬರಲು ಆರಂಭವಾಗಿದೆ. ಆತನ ಆತ್ಮಹತ್ಯೆಯ ಕುರಿತಂತೆ ಲಾಡ್ಜ್ ನವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

ಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಅಸ್ವಾಭಾವಿಕ ಮರಣ ಪ್ರಕರಣವನ್ನ ದಾಖಲಿಸಲಾಗಿದೆ. 

ಶವವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಗೆ ಕಳುಹಿಸಲಾಗಿದೆ.

About The Author

Leave a Reply

Your email address will not be published. Required fields are marked *