ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ 2022-23 ರ ಉರೂಸ್ ಸಮಾರಂಭದ ದಿನಾಂಕ ನಿಗದಿಯಾಗಿದೆ.
ಇಂದು ದರ್ಗಾ ಸಮಿತಿ ಅಧ್ಯಕ್ಷರಾದ ಜೆ ಮಹಮ್ಮದ್ ಸಾಬ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಮೇ 13,14,15,16 ರ ನಾಲ್ಕು ದಿನ ಉರೂಸ್ ಕಾರ್ಯಕ್ರಮ ನಡೆಸಲು, ಉರೂಸ್ ಸಮಾರಂಭಕ್ಕೆ ಮಂತ್ರಿಗಳು ಹಾಗೂ ಶಾಸಕರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ.
ಉರೂಸ್ ಸಮಾರಂಭವನ್ನು ಸರ್ಕಾರ ಸುತ್ತೋಲೆಯಂತೆ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಈ ಸಭೆಯಲ್ಲಿ ವಿನಾಯಕ ಉಡುಪ ,ಆರ್ ಎ ಚಾಬುಸಾಬ್ ರಿಪ್ಪನ್ ಪೇಟೆ, ಜಿ ರಹೆಮಾನ್ , ನಿಟ್ಟೂರು ಅಬ್ದುಲ್ಲಾ,ಇಸೂಬ್ ಸಾಬ್,ಕಚ್ಚಿಗೆಬೈಲ್ ಸಾಧಿಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಉರೂಸ್ ಹಿನ್ನೆಲೆ:
ಹಿರಿಯ ಸ್ವಾತಂತ್ರ ಹೋರಾಟಗಾರ ಎನ್. ವೆಂಕಟರಮಣ ಉಡುಪರಿಗೆ 46 ವರ್ಷದ ಹಿಂದೆ ಅವರ ಕನಸ್ಸಿನಲ್ಲಿ ಬಂದ ಹಝ್ರತ್ ಅವರು ಜನವಸತಿ ಇರದ ನಿರ್ಜನ ಪ್ರದೇಶವೊಂದರಲ್ಲಿ ನೆಲೆನಿಂತಿದ್ದು ವರ್ಷಂಪ್ರತಿ ಉರೂಸ್ ಆಚರಿಸಲು ಸೂಚನೆ ನೀಡಿದ್ದರು. ಆನಂತರ ಸಿ.ವೆಂಕಟರಮಣ ಉಡುಪರ ನೇತೃತ್ವದಲ್ಲಿ ಉರೂಸ್ ನಡೆಯುತ್ತಾ ಬಂದಿದೆ. ಅವರ ಕಾಲಾ ನಂತರ ಅವರ ಮಗ ವಿನಾಯಕ ಉಡುಪರ ನೇತೃತ್ವದಲ್ಲಿ ಮುಂದುವರಿದಿದೆ. ಹಿಂದೂ-ಮುಸ್ಲಿಮ್ ಭಾವೈಕ್ಯತಾ ತಾಣವಾಗಿ ನಗರ ದರ್ಗಾ ಮಹತ್ವ ಪಡೆದಿದೆ. ವರ್ಷಂ ಪ್ರತಿ ನಡೆಯುವ ಉತ್ಸವದಲ್ಲಿ ಮುಸ್ಲಿಮ್ ಸಮುದಾಯ ಮಾತ್ರವಲ್ಲದೆ ಬಹುತೇಕ ಹಿಂದೂಗಳು ಈ ದರ್ಗಾಕ್ಕೆ ಬರುತ್ತಿರುವುದು ಇಲ್ಲಿಯ ವಿಶೇಷವಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್