ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ 5 ಕೆಜಿ ಉಚಿತ ಅಕ್ಕಿಯನ್ನು ಮುಂದುವರಿಸಿರುವ ಸಲುವಾಗಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಪಟ್ಟಣದ ಶ್ರೀ ಮಾತಾ ಮಹಿಳಾ ಸಂಘದ ನ್ಯಾಯಬೆಲೆ ಅಂಗಡಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್ ರವರು ಉದ್ಘಾಟಿಸಿದರು.
ಈ ಸಂರ್ಭದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಈ ಯೋಜನೆಯನ್ನು ಮುಂದುವರಿಸುವ ಮೂಲಕ ಬಡ ಹಾಗೂ ಸಾಮಾನ್ಯ ವರ್ಗದ ಜನರ ಬೆನ್ನಿಗೆ ನಿಂತಿದೆ.ಈಗ ಸರ್ಕಾರ ಸೀಮೆ ಎಣ್ಣೆ ವಿತರಣೆ ನಿಲ್ಲಿಸಿದ್ದು ಮಲೆನಾಡು ಪ್ರದೇಶ ತೀರಾ ಗ್ರಾಮೀಣ ಪ್ರದೇಶವಾಗಿರುವುದರಿಂದ ವಿಶೇಷ ಯೋಜನೆಯಲ್ಲಿ ಮಲೆನಾಡ ಜನತೆಗೆ ಸೀಮೆ ಎಣ್ಣೆ ವಿತರಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.
ನಂತರ ಮಾತನಾಡಿದ ಗ್ರಾಪಂ ಸದಸ್ಯ ಆಸೀಫ಼್ ಭಾಷಾಸಾಬ್ ಬಡವರಿಗೆ ಅಕ್ಕಿ ವಿತರಣೆ ಮಾಡುವುದರೊಂದಿಗೆ ಬೇಳೆ ಕಾಳುಗಳನ್ನು ಸಹ ವಿತರಿಸುವುದರ ಮೂಲಕ ಇಂತಹ ಸಂಕಷ್ಟ ಸಮಯದಲ್ಲಿ ಜನರ ಜೊತೆ ನಿಲ್ಲಬೇಕು ಎಂದರು.
ನಂತರ ಮಾತನಾಡಿದ ಗ್ರಾಪಂ ಸದಸ್ಯರಾದ ನಿರೂಪ್ ಕುಮಾರ್ ಕೇಂದ್ರ ಸರ್ಕಾರದ ಬಡ ಜನರ ಹಸಿವು ನೀಗಿಸುವ ಉದ್ದೇಶದಿಂದ ಈ ಯೋಜನೆ ಮುಂದುವರಿಸಿದ್ದು ಹರ್ಷ ತಂದಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಸುಂದರೇಶ್,ದಾನಮ್ಮ,ವನಮಾಲ
ಜಾಗೃತ ಸಮಿತಿ ಸದಸ್ಯರಾದ ಸುಧಾ ದೇವೇಂದ್ರಆಚಾರ್ ಮಾತಾ ಮಹಿಳಾ ಸಂಘದ ಸದ್ಯಸರಾದ ಎಂ ಗೀತಾ,ಗಾಯತ್ರಿ ಪಡಿತರ ಚೀಟಿದಾರರಾದ ದೇವೇಂದ್ರ, ಸುರೇಶ್, ತಿಮ್ಮಪ್ಪ, ಆಮೀನ, ಮುಸ್ತಾಫಾ ಮತ್ತಿತರರು ಇದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್