ಶಿವಮೊಗ್ಗ: ಹೂವಿನ ಮಾರ್ಕೆಟ್ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ.
ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್ನಲ್ಲಿ ಹೂ ಕೊಡಲು ಹೋದಾಗ ಮೂರು ಬೈಕ್ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು.
ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು.
ಇಂದು ಹೂವು ಕೊಟ್ಟು ಬೈಕ್ ನಲ್ಲಿ ವಾಪಾಸ್ ಬರುವ ವೇಳೆ ನ್ಯೂ ಮಂಡ್ಲಿ ಮೊದಲನೇ ತಿರುವಿನ ಬಳಿ ಮೂರು ಜನ ಅನ್ಯ ಕೋಮಿನ ಯುವಕರು ತಡೆದಿದ್ದಾರೆ.ಏಕೆ ತಡೆದಿದ್ದೀರಿ ಎಂದು ಕೇಳಿದ್ದಕ್ಕೆ ಒಬ್ಬ ಏಕಾಏಕಿ ಹಲ್ಲೆ ನಡೆಸಿದ್ದಾನೆ. ನಂತರ ಮೂವರು ಹಲ್ಲೆ ನಡೆಸಿದ್ದಾರೆ. ಈ ವೇಳೆ ಹಿಂತಿರುಗಿ ನೋಡಿದಾಗ ಇತರೆ ಮೂವರು ಹುಡುಗರು ಲಾಂಗು ಮಚ್ಚು ಝಳಪಿಸುತ್ತಾ ಹಲ್ಲೆ ನಡೆಸಲು ಮುಂದಾಗಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಮಧು ಮೂವರನ್ನು ತಳ್ಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾನೆ.