Headlines

ಕಂಠಪೂರ್ತಿ ಕುಡಿದು, ತಿಂದು ನಂತರ ಬಿಲ್ ಕೇಳಿದ್ದಕ್ಕೆ ಬಿಸಿ ಎಣ್ಣೆ ಎರಚಿದ ದುಷ್ಕರ್ಮಿಗಳು

ಹೋಟೆಲ್ ನಲ್ಲಿ ಕಂಠಪೂರ್ತಿ ಕುಡಿದು ಊಟ ಮಾಡಿ ಬಿಲ್ ಕೇಳಿದ್ದಕ್ಕೆ ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ.

ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ಮದ್ಯದ ಅಂಗಡಿಯಲ್ಲಿ ಮದ್ಯಪಾನ ಮಾಡಿದ ದುಷ್ಕರ್ಮಿಗಳು ಅಲ್ಲೇ ಇದ್ದ ಹೋಟೆಲ್ ಗೆ ಹೋಗಿದ್ದಾರೆ.ಕಂಠಪೂರ್ತಿ ಮದ್ಯ, ಮಾಂಸದೂಟ ಸೇವಿಸಿ ಬಿಲ್ ಕೇಳಿದಾಗ ಗಲಾಟೆ ಮಾಡಿದ್ದಾರೆ. ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಮಾಲೀಕನೊಂದಿಗೆ ಜಗಳವಾಡಿದ್ದಾರೆ. ಮಾಲೀಕನ ಪರವಾಗಿ ಬಂದ ಅಡುಗೆ ಭಟ್ಟರಾದ ಮನೋಜ್ ಕುಮಾರ್ ಮೇಲೆ ಬಾಣಲೆಯಲ್ಲಿದ್ದ ಬಿಸಿ ಎಣ್ಣೆಯನ್ನು ಎರಚಿದ್ದಾರೆ. ಇದರಿಂದಾಗಿ ಮನೋಜ್ ಕುಮಾರ್ ಮುಖ ಸುಟ್ಟು ಕರಕಲಾಗಿದ್ದು, ಅವರಿಗೆ ಕಣ್ಣು ತೆರೆಯಲು ಆಗುತ್ತಿಲ್ಲ. ಕಿವಿ ಕೂಡ ಕೇಳಿಸದಂತಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುತ್ತ ಕಾಲೋನಿ ಮತ್ತು ಜಿಂಕ್ ಲೈನ್ ನಿವಾಸಿಗಳಾಗಿರುವ ಅಜಯ್, ಜಗದೀಶ್, ದೀಪು, ಯೋಗೇಶ್ ಮೊದಲಾದವರು ಗಾಂಜಾ ಸೇವನೆ ಮಾಡಿ ಇಂತಹ ಕೃತ್ಯವೆಸಗಿದ್ದಾರೆ ಎನ್ನಲಾಗಿದ್ದು, ನ್ಯೂಟನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ.

About The Author

Leave a Reply

Your email address will not be published. Required fields are marked *