ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನೊಬ್ಬನು ಧ್ವಜಾರೋಹಣ ದಿನದಂದೇ ರಾಷ್ಟ್ರಧ್ವಜಕ್ಕೆ ಶೂ ಧರಿಸಿ ಅವಮಾನ ಮಾಡಿದ್ದಾರೆ.
ಬೆಳ್ಳೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರಾದ ಅಪ್ಪಾ ಸಾಹೇಬ್ ದರಿ ಗೌಡಾ ಎಂಬುವವರು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಸಮಾರಂಭದಲ್ಲಿ ಶೂ ಧರಿಸಿ ಧ್ವಜಾರೋಹಣ ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.
ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಮಾಹಿತಿ ನೀಡಿದ ಗ್ರಾಮಸ್ಥರೊಬ್ಬರು ಇಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡುವ ಅತಿಥಿಗಳಿಗೆ ಧ್ವಜರೋಹಣ ಕಂಬದ ಬಳಿ ಕರೆದುಕೊಂಡು ಬಂದು ಧ್ವಜರೋಹಣ ಮಾಡುವಂತಹ ಸಂದರ್ಭದಲ್ಲಿ ದೈಹಿಕ ಶಿಕ್ಷಕ ಅಪ್ಪಾ ಸಾಹೇಬ್ ಧರಿ ಗೌಡ ಎಂಬುವವರು ಶೂ ಧರಿಸಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ.
ರಾಷ್ಟ್ರೀಯ ಹಬ್ಬಗಳಲ್ಲಿ ಗಣರಾಜ್ಯೋತ್ಸವ ಕೂಡ ಒಂದು ಹಬ್ಬವಾಗಿದೆ ಅದರಂತೆ ಬೇಜವಾಬ್ದಾರಿ ತೋರಿದ ದೈಹಿಕ ಶಿಕ್ಷಕನ ಫೋಟೋಗಳು ವೈರಲ್ ಆಗಿದ್ದು ದೇಶಾಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.
ಮಕ್ಕಳಿಗೆ ಸರಿಯಾದ ದಾರಿ ತೋರಿಸುವ ಶಿಕ್ಷಕರೇ ಇಂತಹ ಕೆಲಸ ಮಾಡಿದರೆ ದೇಶದ ಭವಿಷ್ಯದ ಬುನಾದಿಯಲ್ಲಿ ಮಕ್ಕಳು ಏನನ್ನು ಕಲಿಯುತ್ತಾರೆ ಅನ್ನೋದು ಯಕ್ಷ ಪ್ರಶ್ನೇಯಾಗಿದೆ.
ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುವ ಮೂಲಕ ಮುಂದೆಯೂ ಕೂಡ ಯಾವುದೇ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಶಿಕ್ಷಣ ಪ್ರೇಮಿಗಳ ಮತ್ತು ಜನಸಾಮಾನ್ಯರ ಒತ್ತಾಯವಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್