ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು 8 ಜನ ಮಕ್ಕಳು,12 ಜನ ಮೊಮ್ಮಕ್ಕಳು ,7 ಜನ ಮರಿ ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಇವರು ರೈತ ಪರ ಸಂಘಟನೆಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು.ರೈತ ಪರ ಹೋರಾಟದಲ್ಲಿ ಇವರು ಬಳ್ಳಾರಿಯಲ್ಲಿ 21 ದಿನ ಜೈಲು ವಾಸ ಅನುಭವಿಸಿದ್ದರು.
ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ಕಗ್ಗಲಿ ಗ್ರಾಮದ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.
ಸಂತಾಪ :
ಕಗ್ಗಲಿ ಕೆ ಸಿ ವೀರಭದ್ರಪ್ಪ ಗೌಡರ ನಿಧನಕ್ಕೆ ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.