ಶಿವಮೊಗ್ಗ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿ ಖುರೇಷಿ ಸಾವು – 3ಕ್ಕೇರಿದ ಸಾವಿನ ಸಂಖ್ಯೆ
ಶಿವಮೊಗ್ಗದಲ್ಲಿ ನಿನ್ನೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್ ಖುರೇಶಿ ಇಂದು ಸಾವನಪ್ಪಿದ್ದು, ಇದರೊಂದಿಗೆ ಗ್ಯಾಂಗ್ ವಾರ್ ನಲ್ಲಿ ಸಾವನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿ ನೆನ್ನೆ ಸಂಜೆ ಲಷ್ಕರ್ ಮೊಹಲ್ಲದದ ಮೀನುಮಾರುಕಟ್ಟೆಯ ಬಳಿ ನಡೆದ ಆದಿಲ್ ಮತ್ತು ಯಾಸಿನ್ ಖುರೇಷಿ ನಡುವಿನ ಗ್ಯಾಂಗ್ ವಾರ್ ನಲ್ಲಿ ಇಬ್ಬರು ಕೊಲೆಯಾಗಿದ್ದರು.
ಘಟನೆ ಸಂದರ್ಭದಲ್ಲಿ ಆದಿಲ್ ಹಾಗು ಸಹಚರರು ಯಾಸಿನ್ ಖುರೇಷಿಗೆ ಮಾರಣಾಂತಿಕವಾಗಿ ಎದೆಗೆ ಹಾಗು ಹೊಟ್ಟೆಗೆ ಚಾಕು ತಿವಿದಿದ್ದರಿಂದ ಯಾಸಿನ್ ಸ್ಥಳದಲ್ಲೇ ಕುಸಿದು ಬಿದ್ದಿದ್ದ.
ತದ ನಂತರದಲ್ಲಿ ರೊಚ್ಚಿಗೆದ್ದ ಯಾಸಿನ್ ಖುರೇಶಿ ಕಡೆಯ ಹುಡುಗರು ಆದಿಲ್ ಸಹಚರರ ಮೇಲೆ ಮಚ್ಚು ಬೀಸಿ ಕಲ್ಲು ಎತ್ತೆಹಾಕಿ ಇಬ್ಬರನ್ನು ಕೊಲೆಗೈದಿದ್ದರು. ನಂತರದಲ್ಲಿ ಸ್ಥಳದಲ್ಲಿ ಕುಸಿದುಬಿದ್ದ ಯಾಸಿನ್ ಖುರೇಷಿಯನ್ನು ಎನ್.ಹೆಚ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಯಾಸಿನ್ ಖುರೇಶಿ ಸಾವನ್ನಪ್ಪಿದ್ದಾನೆ. ನೆನ್ನೆಯ ಮಾರಾಮಾರಿ ಪ್ರಕರಣದಲ್ಲಿ ಒಟ್ಟು ಮೂವರು ಸಾವನ್ನಪ್ಪಿದಂತಾಗಿದೆ. ತಲೆಮೆರಿಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ಬಲೆಬೀಸಿದದ್ದಾರೆ.
ಪ್ರಕರಣವನ್ನು ಗಂಭೀರ ವಿಚಾರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಮಾದಕ ವಸ್ತುಗಳ ಮಾರಾಟ ಜಾಲ ಪ್ರಕರಣದಲ್ಲಿ ಭಾಗಿ ಆಗಿರುವ ಶಂಕೆ ಇದೆ. ನಾಲ್ಕು ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್