SSLC ಫಲಿತಾಂಶ ಪ್ರಕಟ | ಶಿವಮೊಗ ಜಿಲ್ಲೆಗೆ ದಾಖಲೆಯ ಫಲಿತಾಂಶ
ಎಸ್ಸೆಸ್ಸೆಲ್ಸಿ ಪರೀಕ್ಷೆ ರಿಸೆಲ್ಟ್ ಪ್ರಕಟವಾಗಿದ್ದು ಶಿವಮೊಗ್ಗ ಜಿಲ್ಲೆ ದಾಖಲೆ ಫಲಿತಾಂಶ ಪಡೆದಿದೆ. ರಾಜ್ಯಮಟ್ಟದಲ್ಲಿ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಪಡೆದಿದೆ.
ಶೇ.94ರಷ್ಟು ಫಲಿತಾಂಶ ಪಡೆದು ಉಡುಪಿ ಶೈಕ್ಷಣಿಕ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳು ಶೇ.88.67ರಷ್ಟು ಫಲಿತಾಂಶ ಪಡೆದಿದ್ದು, ಕ್ರಮವಾಗಿ ಮೂರು ಮತ್ತು ನಾಲ್ಕನೆ ಸ್ಥಾನ ಪಡೆದಿವೆ.
ಶಿವಮೊಗ್ಗ ಜಿಲ್ಲೆಯಲ್ಲಿ 23,028 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,420 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹಾಗಾಗಿ ಜಿಲ್ಲೆಗೆ ಶೇ.88.67ರಷ್ಟು ಫಲಿತಾಂಶ ದೊರೆತಿದೆ. ರಾಜ್ಯಮಟ್ಟದಲ್ಲಿ ಮೂರನೇ ಸ್ಥಾನ ಪಡೆದಿದೆ. ಕಳೆದ ಬಾರಿ ಶಿವಮೊಗ್ಗ ಜಿಲ್ಲೆ 28ನೇ ಸ್ಥಾನದಲ್ಲಿತ್ತು.
ರಾಜ್ಯಾದ್ಯಂತ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.
ರಾಜ್ಯಾದ್ಯಂತ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ ವತಿಯಿಂದ ಮಾರ್ಚ್ 25 ಮತ್ತು ಏಪ್ರಿಲ್ 6ರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಫಲಿತಾಂಶ ಹೊರ ಬಿದ್ದಿದೆ. ಈ ಪೈಕಿ ಬಾಗಲೋಕೋಟೆಯ ಅಂಕಿತಾ ರಾಜ್ಯಕ್ಕೆ ಟಾಪರ್. 625ಕ್ಕೆ 625 ಅಂಕ ಪಡೆದುಕೊಂಡಿದ್ದಾಳೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್