ತೀರ್ಥಹಳ್ಳಿ : ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್ ಸಮಯದಲ್ಲಿ ವಹಿಸಿದ ಸೂಕ್ತ ಮುನ್ನೆಚ್ಚರಿಕೆ ಹಾಗೂ ವ್ಯಾಕ್ಸಿನ್ ನೀಡಿಕೆಯ ವೇಳೆಯಲ್ಲಿ ಮಾಡಿದ ಪ್ರಾಮಾಣಿಕ ಸೇವೆಯಿಂದ ದೇಶ ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಮತ್ತೆ ಜನಜೀವನ ಚುರುಕುಗೊಂಡಿದೆ. 100 ಕೋಟಿಗೂ ಅಧಿಕ ಲಸಿಕೆ ನೀಡಿ ಭಾರತವು ವಿಶ್ವ ದಾಖಲೆ ಬರೆಯುವಲ್ಲಿ ಇವರ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ಮೇಗರವಳ್ಳಿ ಮಹಾಶಕ್ತಿ ಕೇಂದ್ರದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಅಲ್ಲಿಯ ಸಿಬ್ಬಂದಿ ವರ್ಗದವರಿಗೆ ಸನ್ಮಾನಿಸಿ ಗೌರವ ಸಲ್ಲಿಸುವ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ರಕ್ಷಿತ್ ಮೇಗರವಳ್ಳಿಯವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಗರ್ ಹುಕುಂ ಕಮಿಟಿ ಸದಸ್ಯರಾದ ಚಕ್ಕೋಡ್ ಬೈಲು ರಾಘವೇಂದ್ರ,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಂದನ್ ಹಸಿರುಮನೆ, ತಾ.ಪಂ. ಮಾಜಿ ಉಪಾಧ್ಯಕ್ಷೆ ಯಶೋಧ ಮಂಜುನಾಥ್, ಮೇಗರವಳ್ಳಿ ಗ್ರಾಮಪಂಚಾಯತ್ ಅಧ್ಯಕ್ಷೆ ಪ್ರತಿಮಾ ಪುಟ್ಟಪ್ಪ, ನಾಲೂರು ಗ್ರಾಮಪಂಚಾಯತ್ ಅಧ್ಯಕ್ಷೆ ಶಾರದಾ ವಾಸಪ್ಪ, ಹೆಗ್ಗೋಡು ಗ್ರಾಮಪಂಚಾಯತ್ ಅಧ್ಯಕ್ಷ ಪ್ರದೀಪ ಗುಡ್ಡೆಕೊಪ್ಪ, ಗ್ರಾಮಪಂಚಾಯತ್ ಸದಸ್ಯರಾದ ನವೀನ್ ಮೇಗರವಳ್ಳಿ, ಮೋಹನ್ ನಾಲೂರು, ಕೃಷ್ಣಮೂರ್ತಿ ಬಡಗಬೈಲು,ಮೇಗರವಳ್ಳಿ ಮಹಾಶಕ್ತಿ ಕೇಂದ್ರದ ಯುವಮೋರ್ಚಾ ಅಧ್ಯಕ್ಷ ಅಂಬರೀಶ್ ಮಳಲಿ, ಅಭಿಲಾಶ್ ಕೈಮರ,ಮಹೇಶ್ ಮುಡುವಳ್ಳಿ ಹಾಗೂ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಈ ಸಭೆಯಲ್ಲಿ ಭಾಗಿಯಾದರು.
ವರದಿ: ಪ್ರಶಾಂತ್ ಮೇಗರವಳ್ಳಿ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್