January 11, 2026

ಲೋಕಾಯುಕ್ತದ ಪವರ್ ತೋರಿಸಿದ್ದ ಎನ್ ವೆಂಕಟಾಚಲ ನಿಧನ :

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಜನಪರವಾಗಿ ಬಳಸಿ, ‘ಲೋಕಾಯುಕ್ತರು ಹೀಗೂ ಕೆಲಸ ಮಾಡಬಹುದು’ ಎಂದು ಸಾಧಿಸಿ ತೋರಿಸಿದ ನ್ಯಾಯಮೂರ್ತಿ ಎನ್.ವೆಂಕಟಾಚಲ (90) ಬುಧವಾರ ಬೆಳಿಗ್ಗೆ 6 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
ನ್ಯಾಯಮೂರ್ತಿ ವೆಂಕಟಾಚಲ ಅವರು ಲೋಕಾಯುಕ್ತರಾಗಿ ನೇಮಕಗೊಂಡ ನಂತರವೇ ಸರ್ಕಾರಿ ಅಧಿಕಾರಿಗಳಲ್ಲಿ ಲೋಕಾಯುಕ್ತ ಭಯವನ್ನು ಉಂಟು ಮಾಡಿತು. ಲೋಕಾಯುಕ್ತ ಸಂಸ್ಥೆಯಿಂದ ತಮ್ಮ ನೋವುಗಳಿಗೆ ಪರಿಹಾರ ಸಿಗುತ್ತದೆ ಎಂಬ ಭಾವನೆ ಜನರಲ್ಲಿಯೂ ಬಂತು.
‘ಬಳ್ಳಾರಿ ರಸ್ತೆಯ ಕಾವೇರಿ ಚಿತ್ರಮಂದಿರ ಹಿಂಭಾಗದ  ಲಕ್ಷ್ಮಿ ದೇವಾಲಯದ ಬಳಿಯ ತಮ್ಮ ನಿವಾಸದಲ್ಲಿದ್ದ ಅವರಿಗೆ ಬೆಳಿಗ್ಗೆ 5.45ಕ್ಕೆ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಒಬ್ಬ ಪುತ್ರ ಮತ್ತು ಪುತ್ರಿ ಸದ್ಯ ಅಮೆರಿಕದಲ್ಲಿದ್ದು ಅವರು ಬಂದ ನಂತರ ಗುರುವಾರ (ಅ.31) ಅಂತ್ಯಕ್ರಿಯೆ ‌ನಡೆಯಲಿದೆ’ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹೆಂಡತಿ ಅನುಶ್ರೀಯಾ, ಪುತ್ರರಾದ ಶೇಷಾಚಲ, ವೇದಾಚಲ (ಇಬ್ಬರೂ ವಕೀಲರು) ಮತ್ತು ಅರ್ಜುನಾಚಲ (ಸಾಫ್ಟ್‌ವೇರ್ ಡೆವಲಪರ್) ಮತ್ತು ಮಗಳು ಅರುಣಾಚಲ (ಎಂ.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರು) ಇದ್ದಾರೆ. ಮನೆಯಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೊಮ್ಮಗ ವರುಣ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *