ರಿಪ್ಪನ್ ಪೇಟೆ : ಜನಪ್ರಿಯ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನಕ್ಕೆ ರಿಪ್ಪನ್ ಪೇಟೆಯ ಪುನೀತ್ ರಾಜ್ ಅಭಿಮಾನಿ ಬಳಗ ಹಾಗೂ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ನಾಳೆ ಬೆಳಿಗ್ಗೆ 6ರಿಂದ 12 ಗಂಟೆ ತನಕ ರಿಪ್ಪನ್ ಪೇಟೆ ಸಂಪೂರ್ಣವಾಗಿ ಬಂದ್ ಗೆ ಕರೆ ನೀಡಲಾಗಿದೆ.
ರಿಪ್ಪನ್ ಪೇಟೆಯ ವರ್ತಕರು, ಸಾರ್ವಜನಿಕರು ,ಪುನೀತ್ ರಾಜ್ ಅಭಿಮಾನಿ ಬಳಗದವರು, ಸ್ವಯಂ ಪ್ರೇರಿತರಾಗಿ ಬಂದ್ ಮಾಡಲಿದ್ದು , ಬೆಳಿಗ್ಗೆ 11:30 ಕ್ಕೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಗಲಿದ ದಿವ್ಯ ಚೇತನಕ್ಕೆ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿದೆ.
ಈ ಸ್ವಯಂ ಪ್ರೇರಿತ ಬಂದ್ ನ ಪೂರ್ವಭಾವಿ ಸಭೆಯನ್ನು ಶುಕ್ರವಾರ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆದಿದ್ದು, ಈ ಸಭೆಯಲ್ಲಿ ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ಶ್ರೀಮತಿ ಪದ್ಮ ಸುರೇಶ್ ,ಗೌರವ ಅಧ್ಯಕ್ಷ ಹಿರಿಯಣ್ಣ ಬಂಡಾರಿ,ಆರ್ ಎನ್ ಮಂಜುನಾಥ್, ತ ಮ ನರಸಿಂಹ, ಎನ್. ಸತೀಶ್, ಸುರೇಶ್ ಸಿಂಗ್, ಶ್ರೀಧರ್, ಶೀಲಾ , ಮಂಜನಾಯಕ್, ಪಿಯುಸ್ ಡಿಸೋಜ ಸುಧೀಂದ್ರ ಪೂಜಾರಿ, ಹಸನಬ್ಬ ಚಂದ್ರಬಾಬು, ಟಿ. ಆರ್. ಕೃಷ್ಣಪ್ಪ, ಲಕ್ಷ್ಮಿ ಶ್ರೀನಿವಾಸ್ ,ಇನ್ನು ಮುಂತಾದವರು ಹಾಜರಿದ್ದರು.
ವರದಿ:ದೇವರಾಜ್ ಆರಗ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್