Headlines

ಶಿವಮೊಗ್ಗದಲ್ಲಿ ಚಿರತೆ ದಾಳಿ : ದನ-ಕರು ಸಾವು

ಶಿವಮೊಗ್ಗ: ಚಿರತೆ ದಾಳಿಯಿಂದ ದನ ಹಾಗೂ ಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಉಂಬ್ಳೇಬೈಲು ಸಮೀಪದ ಸಾಲಿಗೆರೆ ಗ್ರಾಮದಲ್ಲಿ ನಡೆದಿದೆ.

ನಿನ್ನೆ ತಡರಾತ್ರಿ ಸಾಲಿಗೆರೆ ಗ್ರಾಮದ ಕೃಷ್ಣಮೂರ್ತಿ ಎಂಬುವರ ಮನೆಯ ಕೊಟ್ಟಿಗೆಗೆ ನುಗ್ಗಿದ ಚಿರತೆ ದನ ಹಾಗೂ ಕರು ಮೇಲೆ ದಾಳಿ ಮಾಡಿದೆ. ಈ ಘಟನೆಯಿಂದ ಗ್ರಾಮದಲ್ಲಿ ಚಿರತೆ ದಾಳಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕೆಲ ದಿನಗಳ ಹಿಂದಷ್ಟೇ ಸಾಲಿಗೆರೆಯ ಗ್ರಾಮಸ್ಥರು ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ್ದರು. ಉಂಬ್ಳೇಬೈಲು, ಸಾಲಿಗೆರೆ ಗ್ರಾಮಗಳ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿಗೆ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿರುವುದು ಆತಂಕಕ್ಕೆ ಕಾರಣವಾಗಿದೆ.

About The Author

Leave a Reply

Your email address will not be published. Required fields are marked *