ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಡಿದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸಾಗರ ತಾಲೂಕಿನ ದೊಡ್ಡೇರಿಯಲ್ಲಿ ನಡೆದಿದೆ.
ದೊಡ್ಡೇರಿಯ ಹಿರಿಯಪ್ಪ- ಮಮತಾ ದಂಪತಿಯ ಪುತ್ರಿ ಐಶ್ವರ್ಯಾ(7) ಮೃತ ದುರ್ಧೈವಿ.ಮನೆ ಬಳಿ ಆಟವಾಡುತ್ತಿದ್ದಾಗ ಹಾವು ಕಡಿದಿದೆ.ತಕ್ಷಣ ಬಾಲಕಿಯ ತಂದೆ ಹಾಗೂ ಚಿಕ್ಕಪ್ಪ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆತಂದಿದ್ದಾರೆ.ಬಾಲಕಿಯು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಜೀವ ರಕ್ಷಿಸಲು ಪ್ರಯತ್ನ ಪಟ್ಟ ಕೆಳದಿ ಅಬ್ಬಾಸ್ ನೋವಿನ ಮಾತು
ಬಾಲಕಿಯ ತಂದೆ ಸಾಗರದ ಆಸ್ಪತ್ರೆಗೆ ಕರೆತರುವಾಗ ದಾರಿ ಮಧ್ಯೆ ಕೆಳದಿ ರಸ್ತೆಯ ಅಬ್ಬಾಸ್ ಅವರಲ್ಲಿ ನಾಟಿ ಔಷಧಿ ದೊರೆಯುವ ವಿಳಾಸ ಕೇಳಿದ್ದಾರೆ.ಬಾಲಕಿಯು ಅಸ್ವಸ್ಥ ಗೊಂಡಿದ್ದನ್ನು ನೋಡಿದ ಅಬ್ಬಾಸ್ ತಮ್ಮ ಬೈಕಿನಲ್ಲಿ ಬಾಲಕಿಯನ್ನು ಕುಳ್ಳಿರಿಸಿಕೊಂಡು ಬಂದಿದ್ದಾರೆ.
ಬಾಲಕಿಯ ಜೀವ ಉಳಿಸಲು ನಾನು ನನ್ನ ಬೈಕಿನಲ್ಲಿ ಆ ಬಾಲಕಿಯನ್ನು ಕುಳ್ಳಿರಿಸಿ ತುಂಬಾ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದೆ ಆದರೆ ಬಾಲಕಿ ಬದುಕುಳಿಯಲಿಲ್ಲಾ ಎಂದು ಅಬ್ಬಾಸ್ ತುಂಬಾ ಬೇಸರ
ವ್ಯಕ್ತಪಡಿಸಿದರು.
ಮಾಹಿತಿ : ಇಮ್ರಾನ್ ಸಾಗರ್
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್