Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ
ಹೊಸನಗರ : ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ದ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು.
ಪಟ್ಟಣದಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ದೇಶದಲ್ಲಿ ಪಕ್ಷ 400 ಕ್ಕು ಹೆಚ್ಚು ಸ್ಥಾನ ಗಳಿಸಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಗದ್ದುಗೆ ಕೂರಿಸುವುದು ಶತಸಿದ್ಧವಾಗಿದೆ, ವಿರೋಧ ಪಕ್ಷದವರಿಗೆ ಪ್ರಧಾನಿ ಅಭ್ಯರ್ಥಿ ಯಾರು ಎಂಬುವುದು ಇನ್ನೂ ಮರೀಚಿಕೆಯಾಗಿದೆ. ಬಿ ವೈ ರಾಘವೇಂದ್ರರವರು ಹಿಂದಿನ ಬಾರಿಗಿಂತ ಹೆಚ್ಚು ಮತಗಳ ಅಂತರದಿಂದ ಪುನರಾಯ್ಕೆಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಸದ ಬಿ ವೈ ರಾಘವೇಂದ್ರರವರು ಜಿಲ್ಲೆಯಲ್ಲಿ ಮಾಡಿದ ಅಭಿವೃದ್ಧಿ ಕಾಮಗಾರಿಗಳೆ ಅವರಿಗೆ ಶ್ರೀರಕ್ಷೆಯಾಗಿದೆ ದೇಶದಲ್ಲಿ ಯಾವುದೇ ಲೋಕಸಭಾ ಸದಸ್ಯರು ಮಾಡದ ಅಭಿವೃದ್ಧಿ ರಾಘವೇಂದ್ರ ರವರು ಶಿವಮೊಗ್ಗ ಜಿಲ್ಲೆಯಲ್ಲಿ ಮಾಡಿರುವುದು ನಗ್ನ ಸತ್ಯವಾಗಿದೆ ಎಂದರು.
ತಾಲೂಕು ಬಿಜೆಪಿ ಅಧ್ಯಕ್ಷ ಕೆವಿ ಸುಬ್ರಹ್ಮಣ್ಯ ಉಮೇಶ್ ಕಂಚುಗಾರ್ ಬೆಳಗೋಡು ಗಣಪತಿ ಎನ್ ಆರ್ ದೇವಾನಂದ ಯುವರಾಜ್ ಎಚ್ ಏನ್ ಶ್ರೀಪತಿ ರಾವ್ ಶಿವಾನಂದ ಶ್ರೀಧರ ಉಡುಪ ಗಣೇಶ ಹಿರೇಮಣತಿ ಗಾಯತ್ರಿ ನಾಗರಾಜ್ ,ನಾಗರತ್ನ ರಮಾನಂದ ಮಾಲಾ ನಾಗರಾಜ್ ಕೃಷ್ಣವೇಣಿ ಮೊದಲಾದವರು ಉಪಸ್ಥಿತರಿದ್ದರು.
ಸಭೆಯ ನಂತರ ಹರತಾಳು ಹಾಲಪ್ಪನವರು ಕಾರ್ಯಕರ್ತರೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಪರ ಮತ ಯಾಚಿಸಿದರು
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್