ಶಿವಮೊಗ್ಗ: ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮಂಗಳವಾರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಉಡುಗೆ ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಸಂಭ್ರಮದಿಂದ ಸಿನೆಮಾ ಹಾಡುಗಳಿಗೆ ಭರ್ಜರಿ ಸ್ಟೆಪ್ ಹಾಕಿ ಸಂಭ್ರಮಿಸಿದರು.
ಕಳೆದ ವರ್ಷದಿಂದ ಕೊರೊನಾ ಮಹಾಮಾರಿಯಿಂದಾಗಿ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಂದ ದೂರ ಉಳಿದಿದ್ದರು. ಕೊರೊನಾ ಸ್ವಲ್ಪ ಮಟ್ಟಿಗೆ ನಿಯಂತ್ರಣಗೊಂಡ ಹಿನ್ನೆಲೆ, ಸರ್ಕಾರ ಶಾಲಾ – ಕಾಲೇಜುಗಳನ್ನು ಪ್ರಾರಂಭಿಸಿದೆ. ಹಾಗಾಗಿ ವಿದ್ಯಾರ್ಥಿಗಳು – ಕಾಲೇಜಿನವರು ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಸಿನೆಮಾ ಹಾಡುಗಳಿಗೆ ಕುಣಿದು ಕುಪ್ಪಳಿಸಿದ್ದಾರೆ. ವಿದ್ಯಾರ್ಥಿಗಳ ಸಂಭ್ರಮವನ್ನು ಶಿಕ್ಷಕರು ಸಾಥ್ ನೀಡಿದ್ದಾರೆ.
::ಗಮನ ಸೆಳೆದ ವಿದ್ಯಾರ್ಥಿಗಳ ಉಡುಗೆ::
ಸಾಂಸ್ಕೃತಿಕ ಕಾರ್ಯಕ್ರಮ ಆಗಿರುವ ಹಿನ್ನೆಲೆ, ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಶೈಲಿಯ ಉಡುಗೆಗಳನ್ನು ಧರಿಸಿಕೊಂಡು ಒಂದಿದ್ದರು. ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಪಟ್ಟರು. ಕಾರ್ಯಕ್ರಮದಲ್ಲಿ ಎಲ್ಲ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್