Breaking
12 Jan 2026, Mon

ರಿಪ್ಪನ್ ಪೇಟೆ: ಸ್ವಾತಂತ್ರ್ಯೋತ್ಸವದ ದಿನದಂದು ಮೌನ ಹೋರಾಟಕ್ಕಿಳಿದ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ:

ರಿಪ್ಪನ್ ಪೇಟೆ:ದೇಶಕ್ಕೆ ಸ್ವಾತಂತ್ರ್ಯಬಂದು ಎಪ್ಪತ್ತೈದು ವರ್ಷವಾಯಿತು,  ಭ್ರಷ್ಟಾಚಾರ ಮಾಡುವವರು,ಲೂಟಿ ಹೊಡೆಯುವವರು ಸ್ವಾತಂತ್ರ್ಯ ಸಿಕ್ಕಿದೆ.ದೇಶಕ್ಕೆ ಸ್ವಾತಂತ್ರ್ಯ ಕೊಟ್ಟಿದ್ದೇವೆ,ಕೊಡಿಸಿದ್ದೇವೆ ಎಂಬ ಕೀಳು ಮಟ್ಟದ ಮಾತುಗಳನ್ನಾಡುತ್ತಿದ್ದಾರೆಯೇ ಹೊರತು ದೇಶದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಆಸಕ್ತಿ ಇಲ್ಲಾ ಇಚ್ಚಾಶಕ್ತಿ ಇಲ್ಲದ ರಾಜಕಾರಣಿಗಳಿಂದ ದೇಶಕ್ಕೆ ಏನೂ ಪ್ರಯೋಜನ ಇಲ್ಲಾ. ಎಲ್ಲಾ ಆಡಂಬರದ ಆಚರಣೆ ಎಂದು ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪೋಲಿಸರನ್ನು ಸದ್ಬಳಕೆ ಮಾಡಿಕೊಂಡ್ಡಿದ್ದರೆ ದೇಶ ಪ್ರಪಂಚಕ್ಕೆ ಮಾದರಿಯಾಗುತ್ತಿತ್ತು,ಆದರೆ ಅವರನ್ನು ಸದ್ಬಳಕೆ ಮಾಡಿಕೊಳ್ಳದೆ ದುರ್ಬಳಕೆ ಮಾಡಿಕೊಂಡು ಕೆಟ್ಟ ನೀತಿಯನ್ನು ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಇಂದು  ರಿಪ್ಪನ್ ಪೇಟೆಯ ಶಿವಮೊಗ್ಗ ಮುಖ್ಯ ರಸ್ತೆ ಬಳಿ ಸರಕಾರ ಮಂಜೂರು ಮಾಡಿದ ದಾಖಲೆಗಳನ್ನು ರಸ್ತೆಯಲ್ಲಿ ಇಟ್ಟು ಮೌನ  ಹೋರಾಟ ನಡೆಸಿದ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ನವರು ಶಿವಮೊಗ್ಗ ಮುಖ್ಯ ರಸ್ತೆಯಿಂದ ಪೋಲಿಸ್ ವಸತಿ ಗೃಹಕ್ಕೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, 2019 ರಲ್ಲಿ ಜಿಲ್ಲಾ ಮಂತ್ರಿಗಳಾದ ಕೆ ಎಸ್ ಈಶ್ವರಪ್ಪ ನವರ ಬಳಿ ಈ ಕುರಿತು ಗಮನಕ್ಕೆ ತಂದಾಗ ತಕ್ಷಣ ಕಾಂಕ್ರೀಟ್ ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ  ಆದೇಶ ಪ್ರತಿ ನೀಡುತ್ತಾರೆ.ಆದರೆ ಸ್ಥಳೀಯ ಗ್ರಾಮ ಪಂಚಾಯತಿ,ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಇಲಾಖೆಗಳು ಕಡೆಗಣಿಸುತ್ತಿವೆ ಎಂದರು.
ನಮ್ಮ ಜಿಲ್ಲೆಯವರಾದ ಆರಗ ಜ್ಞಾನೇಂದ್ರ ರವರು ಗೃಹ ಇಲಾಖೆಯ ಮಂತ್ರಿಗಳಾಗಿದ್ದಾರೆ,ಅವರ ಗಮನಕ್ಕೆ ಈ ಅವ್ಯವಸ್ಥೆ ಗಮನಕ್ಕೆ ಬರಬೇಕು, ಸೂಕ್ತ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಪಡಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಮನೆ ಮುಂಬಾಗದಲ್ಲಿ  ಈ ಕಾಮಗಾರಿ ಆರಂಭವಾಗುವವರೆಗೂ ಏಕಾಂಗಿಯಾಗಿ ಪ್ರತಿಭಟನೆಗೆ ಸಿದ್ದ,ಈ ಹೋರಾಟ ನನ್ನ ಸ್ವಾರ್ಥಕ್ಕಾಗಿ ಅಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಒಟ್ತಾರೆಯಾಗಿ ಬಹುದಿನಗಳ ಬೇಡಿಕೆಯಾಗಿರುವ ರಿಪ್ಪನ್ ಪೇಟೆ ಪೊಲೀಸ್ ವಸತಿಗೃಹಕ್ಕೆ ತೆರಳುವ ರಸ್ತೆಯ ಅವ್ಯವಸ್ಥೆ ನಮ್ಮ ಜಿಲ್ಲೆಯವರೇ ಗೃಹ ಮಂತ್ರಿಯಾಗಿರುವಾಗ ಸರಿಪಡಿಸುವತ್ತ ಗಮನ ಹರಿಸುತ್ತಾರಾ ಕಾದು ನೋಡಬೇಕಾಗಿದೆ.


ವರದಿ : ದೇವರಾಜ್ ರಿಪ್ಪನ್ ಪೇಟೆ


ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *