ರಿಪ್ಪನ್ಪೇಟೆ:ಇಲ್ಲಿನ ಬೈರಾಪುರದ ಕಿರುಮಂತ್ರಾಲಯ ಶ್ರೀಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 23 ರಿಂದ 25 ರವರೆಗೆ ಗುರುರಾಘವೇಂದ್ರ ಸ್ವಾಮಿಗಳವರ 350ನೇ ಆರಾಧನಾ ಮಹೊತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಟಿ.ಪುರುಷೋತ್ತಮ್ರಾವ್ ಮತ್ತು ಕಾರ್ಯದರ್ಶಿ ಕೆ.ದೇವರಾಜ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೊನಾ ಮಾರ್ಗಸೂಚಿಯನ್ವಯ ಸರಳ ಸಂಪ್ರದಾಯದಂತೆ 23ರಂದು ಸೋಮವಾರ ಬೆಳಗ್ಗೆ ಪೂರ್ವಾರಾಧನೆ ಮತ್ತು ವಿಶೇಷ ಪೂಜೆಗಳು ತೀರ್ಥಪ್ರಸಾದ ವಿತರಣೆ, ಆಗಸ್ಟ್ 24 ರಂದು ಮಂಗಳವಾರ ಗುರುರಾಯರ ಆರಾಧನೆ ವಿಶೇಷ ಪೂಜೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ ನಂತರ ವಿನಾಯಕ ಗಾನವೃಂದದವರಿಂದ ಭಕ್ತಿಗೀತೆಗಳ ಗಾನ ಸಂಭ್ರಮ ವ್ಯಕ್ತಿ ವಿಕಾಸ ಕೇಂದ್ರದವರಿಂದ ಸತ್ಸಂಗ ಭಜನಾವಳಿ ಕಾರ್ಯಕ್ರಮ ಆಗಸ್ಟ್ 25 ರಂದು ಬುಧವಾರ ಉತ್ತರಾರಾಧನೆ ವಿಶೆಷ ಪೂಜೆಗಳು ತೀರ್ಥಪ್ರಸಾದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು ಭಕ್ತರು ಪೂಜಾ ಕಾರ್ಯದಲ್ಲಿ ಭಾಗವಹಿಸುವಂತೆ ಮನವಿ ಮಾಡುವ ಮೂಲಕ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರವನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದರು.