Breaking
12 Jan 2026, Mon

ರಿಪ್ಪನ್ ಪೇಟೆ: ಜನಪ್ರತಿನಿಧಿಗಳಿಗೆ ಇಚ್ಛಾ ಶಕ್ತಿ ಇದ್ದರೆ ಹಿಡಿದ ಕೆಲಸ ಪೂರ್ಣಗೊಳಿಸಬಹುದೆಂದು ನಿದರ್ಶಿಸಿದ ಗ್ರಾಪಂ ಸದಸ್ಯ ಸುಂದರೇಶ್:

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸಾಗರ ರಸ್ತೆಯ ಕಾಲೇಜು ಬಳಿ ಮಳೆ ನೀರು ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ, ರಸ್ತೆಯ ತುಂಬ ಹೊಂಡದಂತೆ ತುಂಬಿಕೊಂಡು ಸಾರ್ವಜನಿಕರು, ವಿದ್ಯಾರ್ಥಿ ಗಳಿಗೆ ತುಂಬಾ ತೊಂದರೆಯಾಗುತ್ತಿತ್ತು.


.       :ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಮೊದಲು;

      
ಗ್ರಾಮ ಪಂಚಾಯತ್ ಸದಸ್ಯರಾದ ಸುಂದರೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಸಾಗರ ರಸ್ತೆಯ ಕಾಲೇಜ್ ಬಳಿ ಚರಂಡಿ ನೀರು ರಸ್ತೆಗೆ  ಹರಿಯುತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಬಹಳ ತೊಂದರೆ ಯಾಗುತ್ತಿದೆ ಇದರ ಬಗ್ಗೆ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಚರಂಡಿಯ ಅವೈಜ್ಞಾನಿಕ ಕಾಮಗಾರಿಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ಮನವಿ ಪತ್ರ ಕೂಡ ಕಳೆದ ವರ್ಷ ನೀಡಿದ್ದರೂ ಯಾವುದೇ ಸ್ಪಂದನೆ ಇಲ್ಲ ಹಾಗಾಗಿ ಚರಂಡಿ ವ್ಯವಸ್ಥೆಯ ಬಗ್ಗೆ ತುರ್ತು ಕ್ರಮ ಕೈಗೊಳ್ಳದೆ ಇದ್ದರೆ ಸಾಗರ- ರಿಪ್ಪನ್ ಪೇಟೆ ರಸ್ತೆಯನ್ನು ತಡೆದು ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿ ಸಂಬಂಧಪಟ್ಟ ಇಲಾಖೆಗೆ ಕೂಡಲೇ ಕರೆ ಮಾಡಿ ಎಚ್ಚರಿಸಿದ್ದರು.

°ಈ ಸುದ್ದಿಯನ್ನು ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು.°

ಇದರಿಂದ ಪಿಡಬ್ಲ್ಯೂಡಿ ಹಿರಿಯ ಅಧಿಕಾರಿಗಳು ಎಚ್ಛೆತ್ತುಕೊಂಡು ಸಾಗರ ರಸ್ತೆಯ ಚರಂಡಿಯ ಕಾಮಗಾರಿಯನ್ನು ಕೈಗೆತ್ತಿಗೊಂಡು ಕೂಡಲೇ ಸಮಸ್ಯೆಗೆ ಸ್ಪಂದಿಸಿದ್ದಾರೆ.

      : ವರದಿಯ ನಂತರ ನಡೆಯುತ್ತಿರುವ ಕಾಮಗಾರಿ:



ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿ ಮತ್ತು ಕೆಲಸ ದ ಮೇಲೆ ಇಚ್ಚಾ ಶಕ್ತಿ ತೋರಿಸಿದರೆ ಯಾವ ಕೆಲಸವೂ ಅಸಾಧ್ಯವಿಲ್ಲ ಎಂದು ರಿಪ್ಪನ್ ಪೇಟೆ ಗ್ರಾಪಂ ಸದಸ್ಯ ಸುಂದರೇಶ್ ರವರು ತೋರಿಸಿಕೊಟ್ಟಿದ್ದಾರೆ.ಗ್ರಾಪಂ ಸದಸ್ಯ ಸುಂದರೇಶ್ ರವರ ಕಾರ್ಯವೈಖರಿಯನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.

      ;ಸುಂದರೇಶ್ ಗ್ರಾಪಂ ಸದಸ್ಯರು ರಿಪ್ಪನ್ ಪೇಟೆ;








ವರದಿ: ರಾಮನಾಥ್ ರಿಪ್ಪನ್ ಪೇಟೆ


ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..




About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *