Headlines

ಆಕಳು ಖರೀದಿಗೆ ಸಹಾಯಧನಕ್ಕಾಗಿ ಆರ್ಜಿ ಆಹ್ವಾನ::

ಶಿವಮೊಗ್ಗ, ಜುಲೈ-03: ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಹೈನುಗಾರಿಕೆಗೆ ಯೋಗ್ಯವಾದ ಒಂದು ವರ್ಷ ಮೇಲ್ಪಟ್ಟ ಮತ್ತು ವಿಮೆಗೊಳಪಡಿಸುವ ಸಮಯದಲ್ಲಿ ಗರಿಷ್ಠ 8 ವರ್ಷಗಳಿಗೆ ಮೀರದಂತಹ ಮಣಕ/ಆಕಳು/ಎಮ್ಮೆಗಳಿಗೆ ಒಂದು ವರ್ಷದ/ಮೂರು ವರ್ಷದ ಅವಧಿಗೆ ಮಾರುಕಟ್ಟೆ ಮೌಲ್ಯದ 2%/6% ಪ್ರೀಮಿಯಂ ದರದಲ್ಲಿ ಗರಿಷ್ಠ ರೂ. 70 ಸಾವಿರ ಮೂಲ ಬೆಲೆಯವರೆಗೆ ಕೆಳಕಂಡ ಪ್ರೀಮಿಯಂ ಸಹಾಯಧನದ ದರದಂತೆ ವಿಮಾ ಸೌಲಭ್ಯ ಒದಗಿಸಲಾಗುತ್ತಿದೆ.  
ಬಿ.ಪಿ.ಎಲ್ ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ 70% ಹಾಗೂ ಎ.ಪಿ.ಎಲ್. ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ 50% ಆಗಿದ್ದು,  ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  
————————–
ವರದಿ: ಸೆಬಾಸ್ಟಿಯನ್ ಮ್ಯಾಥ್ಯೂಸ್‌ ರಿಪ್ಪನ್ ಪೇಟೆ

Leave a Reply

Your email address will not be published. Required fields are marked *