ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಚಿಕ್ಕಪ್ಪ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಕೊಪ್ಪದ ಕೆರೆ ಬಳಿಯ ಕೆರೆಯಲ್ಲಿ ಗೋಣಿಚೀಲದಲ್ಲಿ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದ್ದ ಪ್ರಕರಣದಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗೆ ಸಂಬಂಧದಲ್ಲಿ ಬಾಲಕಿ ತಂಗಿಯಾಗಬೇಕು.
ಪ್ರಕರಣದಲ್ಲಿ ಬಾಲಕಿಯ ಪಾಲಕರು ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಅದರಂತೆ ಪೊಲೀಸರು ಅವರು ಶಂಕಿಸಿದ ವ್ಯಕ್ತಿಯನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ನಡೆದ ಘಟನೆಯನ್ನು ವಿವರಿಸಿದ್ದಾರೆ.
ಸ್ವಂತ ಚಿಕ್ಕಪ್ಪನ ಮಗಳನ್ನ ಆರೋಪಿ ಕೊಲೆ ಮಾಡಿದ್ದ ಈತ ಮೃತದೇಹವನ್ನು ಚೀಲದಲ್ಲಿ ಕಟ್ಟಿ ಬಿಸಾಡಿದ್ದನು.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆರೋಪಿಯು ಈ ಕೃತ್ಯವೆಸಗಿದ್ದ ಎನ್ನಲಾಗಿದ್ದು, ಸದ್ಯ ಪೊಲೀಸರು ಆರೋಪಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್