ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ.
ಶಿವಮೊಗ್ಗ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರು ರಿಟರ್ನಿಂಗ್ ಆಫೀಸರ್ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು.
ಶಿವಮೊಗ್ಗ ವಿಭಾಗ :
ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್ ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ತಾಲೂಕಿನಿಂದ ಸ್ಪರ್ಧಿಸಿದ್ದ ಹೆಚ್.ಬಿ.ದಿನೇಶ್ ಬಹುಮತ ಪಡೆಯುವ ಮೂಲಕ ವಿಜಯಶಾಲಿಯಾಗಿದ್ದಾರೆ.
ಸಾಗರ ವಿಭಾಗ :
ಸಾಗರ ವಿಭಾಗದಿಂದ ವಿದ್ಯಾಧರ್ ಅವಿರೋಧ ಆಯ್ಕೆಯಾಗಿದ್ದು, ಟಿ.ಶಿವಶಂಕರಪ್ಪ, ಟಿ.ಎಸ್.ದಯಾನಂದ ಗೌಡ್ರು ಜಯಭೇರಿ ಭಾರಿಸಿದ್ದಾರೆ.
ದಾವಣಗೆರೆ ವಿಭಾಗ :
ದಾವಣಗೆರೆ ವಿಭಾಗದಿಂದ ಶಿಮುಲ್ ಮಾಜಿ ಉಪಾಧ್ಯಕ್ಷ ಹೆಚ್.ಕೆ.ಬಸಪ್ಪ, ಜಗದೀಶಪ್ಪ ಬಣಕಾರ್, ಚೇತನ್ ಎಸ್.ನಾಡಿಗೇರ್, ಬಿ.ಜಿ.ಬಸವರಾಜಪ್ಪ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ ವಿಭಾಗ :
ಚಿತ್ರದುರ್ಗ ವಿಭಾಗದಿಂದ ಜಿ.ಪಿ.ರೇವಣಸಿದ್ದಪ್ಪ, ಶೇಖರಪ್ಪ.ಜಿ.ಬಿ, ಸಂಜೀವಮೂರ್ತಿ, ಬಿ.ಆರ್.ರವಿಕುಮಾರ್ ಆಯ್ಕೆಯಾಗಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply