Rameshwaram ಕೆಫೆ ಸ್ಪೋಟ ಪ್ರಕರಣ : ಶಂಕಿತ ಉಗ್ರ ತೀರ್ಥಹಳ್ಳಿಯ ಮುಜಾವಿರ್ ಹುಸೇನ್ ಅರೆಸ್ಟ್..!
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಶಂಕಿತ ಉಗ್ರ ಮುಜಾವಿರ್ ಹುಸೇನ್ ಶಾಝಿಬ್ ನನ್ನು NIA ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಉಗ್ರ ಮುಜಾವಿರ್ ಹುಸೇನ್ ಶಾಝಿಬ್ ಜೊತೆ ಮತ್ತೊಬ್ಬ ಉಗ್ರನ ಬಂಧನ ಆಗಿದೆ ಎನ್ನಲಾಗಿದೆ. NIA ತಂಡದಿಂದ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನು ಬಂಧನ ಮಾಡಲಾಗಿದೆ.
ಶಂಕಿತ ಉಗ್ರರು ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಕಡೆ ತಲೆಮರೆಸಿಕೊಂಡು ಓಡಾಡುತ್ತಿದ್ದರು ಎನ್ನಲಾಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎನ್ಐಎ ತಂಡ ಶಂಕಿತ ಉಗ್ರರನ್ನು ಬಂಧನ ಮಾಡಿದೆ.
ಮಾರ್ಚ್ 1ರಂದು ಕೆಫೆ ಬಾಂಬ್ ಸ್ಫೋಟ ನಡೆದಿತ್ತು. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಮುಜಾವಿರ್ ಹುಸೇನ್ ನ್ನು ತನಿಖೆ ವೇಳೆ ಸಿಕ್ಕ ಮಾಹಿತಿ ಆಧರಿಸಿ ಅರೆಸ್ಟ್ ಮಾಡಿರುವ ಮಾಹಿತಿ ಲಭ್ಯವಾಗಿದೆ. ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮುಜಾವಿರ್ ಜೊತೆ ಮತೀನ್ ತಾಹ ಬಂಧಿಸಿದ್ದು, ಇಬ್ಬರು ಶಂಕಿತರನ್ನೂ ರಹಸ್ಯ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ಅಬ್ದುಲ್ ಮತೀನ್ ತಾಹ ಸ್ಫೋಟಕ್ಕೆ ಸಹಕರಿಸಿದ ಆರೋಪ ಕೇಳಿಬಂದಿದೆ. ಶಂಕಿತ ಉಗ್ರರು ಬೇರೆ-ಬೇರೆ ಮಾರ್ಗಗಳಲ್ಲಿ ಪಶ್ಚಿಮ ಬಂಗಾಳಕ್ಕೆ ಹೋಗಿದ್ದು, NIA ತಂಡ ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಶೋಧ ನಡೆಸಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್