Breaking
12 Jan 2026, Mon

ಯಡಿಯೂರಪ್ಪ ಮತ್ತು ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲೇ ಬಯಲಿಗೆ ಎಳೆಯುತ್ತೇನೆ – ಶಾಸಕ ಬೇಳೂರು

ಯಡಿಯೂರಪ್ಪ ಹಾಗೂ ಅವರ ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲಿಯೇ ಬಯಲಿಗೆ ಎಳೆಯುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಆನಂದಪುರದಲ್ಲಿ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು ಗುರುವಾರ ಸಂಜೆ ವೀಕ್ಷಿಸಿ ಪತ್ರಕರ್ತರೊಂದಿಗೆ ಮಾತನಾಡಿ ಡಿಸಿಸಿ ಬ್ಯಾಂಕ್ ಹುದ್ದೆ ಗಳ ನೇಮಕಾತಿ ಹಾಗೂ ಸಾಗರ ಸಾಯಿ ಗಾರ್ಮೆಂಟ್ ಗೆ ನೀಡಿದ 145 ಎಕರೆ ಭೂಮಿ ವಿಚಾರದಲ್ಲಿ ನಡೆದ ಅಕ್ರಮ ನಡೆದಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಅಕ್ರಮವನ್ನು ಶೀಘ್ರದಲ್ಲಿ ಬಯಲಿಗೆಳೆಯುತ್ತೆನೆಂದು ಎಂದರು.

ಡಿಸಿಸಿ ಬ್ಯಾಂಕಿನ ಹಿಂದಿನ ಅವಧಿಯಲ್ಲಿ ಬ್ಯಾಂಕಿನ ವಿವಿಧ ಹುದ್ದೆಗಳ ನೇಮಕಾತಿಯ ಸಂದರ್ಭದಲ್ಲಿ ಸಂಸದ ಬಿ.ವೈ ರಾಘವೇಂದ್ರ ಅಕ್ರಮ ವೆಸಗಿರುವ ಬಗ್ಗೆ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸಭೆಯಲ್ಲಿ ಪ್ರಸ್ತಾಪ ಬಂದಿದ್ದು ಅಕ್ರಮ ನಡೆಸಿದವರ ವಿರುದ್ಧ ದೂರು ದಾಖಲಿಸುವಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಶಾಸಕನಾದ ನಾನು ಒತ್ತಾಯಿಸಿದ್ದೇನೆ ಎಂದು ತಿಳಿಸಿದರು.

ಸಾಗರ, ಹೊಸನಗರ ಕ್ಷೇತ್ರದ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಸಾಧಿಸಿದೆ. ಕಾರ್ಗಲ್ ಪಟ್ಟಣ ಪಂಚಾಯಿತಿ ಹಾಗೂ ಹೊಸನಗರ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಸಹಕಾರದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಿ ಕಾಂಗ್ರೆಸ್ ಪಕ್ಷ ಇತಿಹಾಸ ಸೃಷ್ಟಿಸಿದೆ.

ಶಿಮುಲು ಆಡಳಿತ ಮಂಡಳಿಯ ಅಧ್ಯಕ್ಷರ ಆಯ್ಕೆಯಲ್ಲಿ ಶಿವಮೊಗ್ಗ ,ದಾವಣಗೆರೆ, ಚಿತ್ರದುರ್ಗ ಮೂರು ಜಿಲ್ಲೆಗಳಿಂದ 14 ಮಂದಿ ನಿರ್ದೇಶಕರಿದ್ದು ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ಎಲ್ಲಾ ಪಕ್ಷದವರನ್ನು ಒಂದುಗೂಡಿಸಿ ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅವಿರೋಧವಾಗಿ ಆಯ್ಕೆ ಮಾಡುವುದರ ಮೂಲಕ ಸಹಕಾರ ಸಂಘ ಹೀಗೆ ಇರಬೇಕು ಎಂದು ಸಂದೇಶ ನೀಡಿದ್ದೇವೆ. ಮುಂದೆ ನಡೆಯುವ ಸಾಗರ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಗಳಿಸುವ ವಿಶ್ವಾಸವಿದೆ ಎಂದು ಹೇಳಿದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *