ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಬಂಕಾಪುರ ಪಟ್ಟಣದ ಮಾಜಿ ಪುರಸಭೆ ಸದಸ್ಯರಾದ ಎಂ ವಿ ಪದ್ಮಾ ರವರು ದಸರಾ ಗೊಂಬೆ ಕೂರಿಸುವ ಮೂಲಕ ಮೈಸೂರು ಭಾಗದಲ್ಲಿದ್ದ ಸಂಪ್ರದಾಯವನ್ನು ಹಾವೇರಿ ಜಿಲ್ಲೆಗೂ ವಿಸ್ತರಿಸಿದ್ದಾರೆ.
ಹೌದು. ಸುಮಾರು 3 ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿರುವ ಇವರು ನವರಾತ್ರಿಯನ್ನು ವಿಶೇಷವಾಗಿ ಆಚರಿಸುತ್ತಾರೆ. ಇವರ ಮನೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿದ್ದು ಪ್ರತಿನಿತ್ಯ ಸಂಜೆ ಮುತ್ತೈದೆಯರಿಗೆ ಉಡಿ ತುಂಬಿ ಅರಿಷಿಣ ಕುಂಕುಮ ವಿನಿಮಯ ಮಾಡಿಕೊಳ್ಳಲಾಗುತ್ತದೆ.
ವಿಷ್ಣುವಿನ ದಶಾವತಾರಗಳು, ರಾಮಾಯಣ, ಮಹಾಭಾರತ ಸಂಗೀತೋಪಕರಣಗಳು, ವಿವಿಧ ಹಣ್ಣುಗಳು ತರಕಾರಿಗಳ ಗೊಂಬೆಗಳು ಗಮನ ಸೆಳೆಯುತ್ತವೆ. ಅದರಲ್ಲೂ ಹಲವು ತರದ ಪಕ್ಷಿಗಳ ಗೊಂಬೆಗಳು ಪಕ್ಷಿಲೋಕವನ್ನೇ ಅನಾವರಣಗೊಳಿಸಿವೆ. ಸವದತ್ತಿ ಯಲ್ಲಮ್ಮ,ಯಡೆಯೂರು ಸಿದ್ದಲಿಂಗೇಶ,ಪಂಡಿತ ಪುಟ್ಟರಾಜ ಗವಾಯಿಗಳು ಸೇರಿದಂತೆ ವಿವಿಧ ಮೂರ್ತಿಗಳ ನೋಡುಗರಲ್ಲಿ ಭಕ್ತಿಭಾವ ಹುಟ್ಟಿಸುತ್ತವೆ. ಶಿವ ವಿಷ್ಣು, ವಿಘ್ನೇಶ್ವರ,ಬ್ರಹ್ಮ ಗೌರಿ ಪಾರ್ವತಿ ಕೃಷ್ಣ ಸೇರಿದಂತೆ ವಿವಿಧ ದೇವಾನುದೇವತೆಗಳ ಮೂರ್ತಿಗಳು ಆಕರ್ಷಣೀಯವಾಗಿವೆ.
ಪದ್ಮಾ ಹಿರೇಮಠ ಮೂಲತಃ ತುಮಕೂರಿನವರು. ಅವರು ಮದುವೆಯಾಗಿ ಬಂದಾಗ ತವರು ಮನೆಯವರು ಒಂದು ಗಂಡು ಮತ್ತು ಒಂದು ಹೆಣ್ಣು ಗೊಂಬೆಗಳನ್ನು ಉಡುಗೂರೆಯಾಗಿ ನೀಡಿದ್ದಾರೆ.
ಗೊಂಬೆ ನೋಡಲು ಬರುವ ಮಹಿಳೆಯರು ಗೊಂಬೆಗಳಿಗೆ ಅಕ್ಷತೆ ಹಾಕಿ ಆರತಿ ಮಾಡಿ ಭಕ್ತಿ ಬಾವದಿಂದ ನಮಸ್ಕರಿಸಿ ದೈವಿಭಾವನೆ ಕಾಣುತ್ತಾರೆ.
ಈದಿನ ದುರ್ಗಾಷ್ಟಮಿ ನಿಮಿತ್ಯ ಬಾಲ ಮಕ್ಕಳಿಗೆ ಉಡಿ ತುಂಬವ ಕಾರ್ಯಕ್ರಮ ಬಾಲ ಮುತ್ತೈದೆಯರಿಗೆ ಭಕ್ತಿಯಿಂದ ಉಡಿ ತುಂಬಿ ಮಕ್ಕಳಿಗೆ ನಮಸ್ಕರಿಸಿದರು
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್