Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಭೇಟಿ ನೀಡಿದ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್
ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆಯಾಗಿತ್ತು.
ಈ ಹಿನ್ನಲೆಯಲ್ಲಿ ರಸ್ತೆ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿದ ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ತುರ್ತು ದುರಸ್ತಿಗೆ ಸೂಚಿಸಿದ್ದಾರೆ.
ನಂತರ ಮಾತನಾಡಿದ ಅವರು ಹುಂಚ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದ ಮನೆ ಕುಸಿತ ,ಸಂಪರ್ಕ ಕಡಿತ ಸೇರಿದಂತೆ ಮಳೆಹಾನಿ ಸಮಸ್ಯೆಗಳಿದ್ದಲ್ಲಿ ಕೂಡಲೇ ಗ್ರಾಮಾಡಳಿತದ ಗಮನಕ್ಕೆ ತಂದಲ್ಲಿ ತ್ವರಿತವಾಗಿ ಸ್ಪಂದಿಸುತ್ತೇವೆ , ನಾಗರಹಳ್ಳಿ ಸೇತುವೆ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು.
ಸಂಪರ್ಕ ರಸ್ತೆ ಕುಸಿದಿರುವ ಬಗ್ಗೆ ಶುಕ್ರವಾರ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಬಿತ್ತರಿಸಲಾಗಿತ್ತು.
ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯರಾದ ದೇವೇಂದ್ರ ಹುಂಚ , ಗ್ರಾಪಂ ಪಿಡಿಓ ರಮೇಶ್ , ಸತೀಶ್ ಹಾಗೂ ಇನ್ನಿತರರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್