ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ
ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ
ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಅರೆಸ್ಟ್
15 ಸಾವಿರ ಸಾಲದ ಹಣ ವಾಪಾಸ್ ಕೊಡುವಂತೆ ಹೇಳಿದ್ದಕ್ಕೆ ತಾಯಿ-ಮಗಳು-ಅಪ್ರಾಪ್ತ ಮಗ ಸೇರಿ ಮಹಿಳೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಂಜನಾ ದಡ್ಡಿಕರ್ ಹತ್ಯೆಯಾದ ಮಹಿಳೆ. ಗಣೇಶ್ ಪುರದ ಅಪಾರ್ಟ್ ಮೆಂಟ್ ನಲ್ಲಿ ಅಂಜನಾ ಅವರನ್ನು ಏ.22ರಂದು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಕೆಲಸ ಮುಗಿಸಿ ಪತಿ ಮನೆಗೆ ಹಿಂದಿರುಗಿದಾಗಲೇ ಪತ್ನಿ ಕೊಲೆಯಾಗಿರುವುದು ಗೊತ್ತಾಗಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ. ಜ್ಯೋತಿ ಬಾಂದೇಕರ್, ಮಗಳು ಸುಹಾನಿ ಬಾಂದೇಕರ್ ಹಾಗೂ ಜ್ಯೋತಿ ಅಪ್ರಾಪ್ತ ಮಗನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯನ್ನು ಕೊಂದು ಬಳಿಕ ಪೊಲೀಸರ ದಿಕ್ಕುತಪ್ಪಿಸಲು ಮೃತ ಮಹಿಳೆಯ ಮೈಮೇಲೆ ಇದ್ದ ಚಿನ್ನಾಭರಣಗಳನ್ನು ಲೂಟಿ ಮಾಡಿ ಪರಾರಿಯಾಗಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್