Ripponpete | ರಾಷ್ಟ್ರ ಮಟ್ಟದ ‘ನೆಟ್ ಬಾಲ್’ ಪಂದ್ಯಾವಳಿಗೆ ಆಲುವಳ್ಳಿಯ ವಿಕ್ರಮ್ ರಾಜಾಮಣಿ ಆಯ್ಕೆ
ರಿಪ್ಪನ್ಪೇಟೆ : ಇಲ್ಲಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಯುವಕ ವಿಕ್ರಮ್ ರಾಜಾಮಣಿ ಕಿರಿಯರ ರಾಷ್ಟ್ರ ಮಟ್ಟದ ನೆಟ್ ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ.
ಆಲುವಳ್ಳಿ ಗ್ರಾಮದ ನಿವಾಸಿಗಳಾದ ತೇಜಸ್ವಿ ಆಲವಳ್ಳಿ ಮತ್ತು ಶ್ವೇತಾ ದಂಪತಿಗಳ ಪುತ್ರನಾದ ವಿಕ್ರಮ್ ರಾಜಾಮಣಿ ಪ್ರಸ್ತುತ ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತಿದ್ದಾನೆ.
ಜನವರಿ 25 ರಿಂದ 28 ರವರೆಗೆ ಮಧ್ಯಪ್ರದೇಶದಲ್ಲಿ ನಡೆಯುವ 36ನೇ ಕಿರಿಯರ ರಾಷ್ಟ್ರೀಯ ನೆಟ್ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಅದ್ಬುತ ಸಾಧನೆಗೈದಿದ್ದಾನೆ.
ರಿಪ್ಪನ್ಪೇಟೆಯ ಬಸವೇಶ್ವರ ವಿದ್ಯಾಲಯದಲ್ಲಿ 1 ರಿಂದ 7 ನೇ ತರಗತಿ ಹಾಗೂ ರಾಮಕೃಷ್ಣ ವಿದ್ಯಾಲಯದಲ್ಲಿ 8 ರಿಂದ 10 ರವರೆಗೂ ವ್ಯಾಸಾಂಗ ಮಾಡಿರುವ ವಿಕ್ರಮ್ ಪ್ರಸ್ತುತ ಉಜಿರೆಯ ಎಸ್ ಡಿ ಎಂ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತಿದ್ದಾನೆ…
ಗ್ರಾಮೀಣ ಪ್ರದೇಶದ ಯುವಕ ನೆಟ್ ಬಾಲ್ ಕ್ರೀಡೆಯಲ್ಲಿ ಅಭೂತಪೂರ್ವ ಸಾಧನೆಗೈಯುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ಮಧ್ಯಪ್ರದೇಶದಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಭಾರತ ತಂಡವನ್ನು ಪ್ರತಿನಿಧಿಸಲಿ ಎಂದು ಪೋಸ್ಟ್ ಮ್ಯಾನ್ ನ್ಯೂಸ್ ಆಶಿಸುತ್ತದೆ..
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್