ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ
ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ
ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ
ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ನಡೆದಿದೆ.
ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಗುರು ಹಂದಿ ಶಿಕಾರಿಗೆಂದು ಸಿಡಿಮದ್ದು ತಯಾರು ಮಾಡಿದ್ದನು. ಹಿಂದಿನ ದಿನ ಸಿಡಿಮದ್ದು ತಯಾರಿಸಿ ಒಣಗಲೆಂದು ತನ್ನ ಮನೆ ಪಕ್ಕದ ಮೈದಾನದ ಗುಂಡಿಯೊಳಗೆ ಇಟ್ಟಿದ್ದನು.
ಭಾನುವಾರ (ಜೂ.01) ರಂದು ಹಸು ಮೈದಾನಕ್ಕೆ ಮೇಯಲು ಬಂದಿತ್ತು. ಈ ವೇಳೆ ಹಸು ಕಾಲು ಜಾರಿ ಗುಂಡಿಯೊಳಗೆ ಬಿದ್ದಿದೆ. ಹಸು ಬಿದ್ದ ಕೂಡಲೆ ಸಿಡಿಮದ್ದು ಬ್ಲಾಸ್ಟ್ ಆಗಿ ಹಸು ಮೃತಪಟ್ಟಿದೆ.
ಸ್ಪೋಟಕವನ್ನು ಪಟಾಕಿ ಮದ್ದು ಹಾಗೂ ಬೆಂಕಿ ಕಡ್ಡಿ ಮದ್ದು ಬಳಸಿ ಆರೋಪಿ ಗುರು ತಯಾರಿಸಿದ್ದ ಎಂದು ತಿಳಿದುಬಂದಿದೆ. ಭದ್ರಾವತಿ ಪೇಪರ್ ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್