SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.!
ಯುವತಿಯ ಕಿರುಕುಳ ತಾಳಲಾರದೇ ಸೆಲ್ಪಿ ವಿಡಿಯೋ ಮಾಡಿಟ್ಟು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂನ್ 13 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರಾಜಘಟ್ಟ ಕೆರೆಯ ಬಳಿ ಘಟನೆ ನಡೆದಿದೆ.
ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿದ ಯುವಕ-ಯುವತಿಯ ಮೋಸ ಮಾಡಿದ ಬಗ್ಗೆ ಬಿಚ್ಚಿಟ್ಟಿದ್ದಾನೆ. ದೊಡ್ಡಬಳ್ಳಾಪುರದ ಮಂಜುನಾಥ್ ಎಂಬ ಯುವಕ ರಾಜಘಟ್ಟ ಕೆರೆಯ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಷದ ಮಾತ್ರೆಗಳನ್ನು ಸೇವಿಸಿ ಯುವಕ ಸೂಸೈಡ್ ಮಾಡಿಕೊಂಡಿದ್ದಾನೆ.
ಯುವತಿ ನನ್ನನ್ನು ನಂಬಿಸಿ ಮೋಸ ಮಾಡಿದ್ದಾಳೆ. ನಾನು ಅವಳ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದೆ, ಆದರೂ ಆಕೆಯನ್ನು ನಾನು ಮದುವೆಯಾಗಲು ನಿರ್ಧರಿಸಿದ್ದೆ, ಎಂದು ಆತ ವಿಡಿಯೋದಲ್ಲಿ ಹೇಳಿದ್ದಾನೆ. ಅಲ್ಲದೇ ಆಕೆಗೆ ಬೇರೋಬ್ಬನ ಜೊತೆಯಲ್ಲಿ ಸಂಬಂಧವಿದೆ ಎಂದು ಯುವಕ ವಿಡಿಯೋದಲ್ಲಿ ಆರೋಪಿಸಿದ್ದಾನೆ. ನನ್ನ ಸಾವಿಗೆ ನಾನು ಪ್ರೀತಿಸಿದ ಯುವತಿಯೇ ಕಾರಣ ಎಂದು ಯುವಕ ಸೆಲ್ಫಿ ವಿಡಿಯೋ ಮಾಡಿ ಸೂಸೈಡ್ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಯುವತಿ ಹಾಗೂ ಅವರ ಮನೆಯವರೇ ಕಾರಣ ಎಂದು ಯುವಕ ವಿಡಿಯೋದಲ್ಲಿ ಹೇಳಿದ್ದಾನೆ .
ಮಂಜುನಾಥ್ ರನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಆತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್