Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ
ರಿಪ್ಪನ್ಪೇಟೆ : ನಂದಗೋಕುಲ ಗೋಶಾಲೆ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಹೊಸನಗರದಲ್ಲಿರುವ ಗೋಶಾಲೆಗೆ ಪಟ್ಟಣದ ಬಜರಂಗದಳ ಘಟಕದ ವತಿಯಿಂದ ಉಚಿತ ಮೇವು ಸಂಗ್ರಹ ಅಭಿಯಾನ ನಡೆಯಿತು.
ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮಸ್ಥರು ಸುಮಾರು 100 ಕ್ಕೂ ಹೆಚ್ಚು ಹೊರೆ ಹುಲ್ಲನ್ನು ನೀಡುವ ಮೂಲಕ ಈ ಮೇವು ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.ಈ ಮೂಲಕ ಮೇವುಗಳನ್ನು ಹೊಸನಗರದ ರಮಿತ್ ನೇತ್ರತ್ವದ ಗೋಶಾಲೆಗೆ ಕಳುಹಿಸಿಕೊಡಲಾಗಿದೆ.
ಈ ಸಂದರ್ಭದಲ್ಲಿ ಬಜರಂಗದಳ ಹೊಸನಗರ ತಾಲೂಕ್ ಕಾರ್ಯದರ್ಶಿ ದೇವರಾಜ್ ಕುಷನ್ , ರಾಘವೇಂದ್ರ,ರಮಿತ್ ಹೊಸನಗರ, ರಾಘವೇಂದ್ರ ಪಾಪಣ್ಣ, ಸಂಜಯ್ ಸ್ವಾಮಿ, ರಂಜನ್ ರಾವ್,ಮಂಜು, ಶ್ರೀನಿವಾಸ್ ಆಚಾರ್,ಗಣೇಶ್, ನಾಗಾರ್ಜುನ್ ಸ್ವಾಮಿ, ದಾನೇಶ್ ಅಲ್ಲುವಲ್ಲಿ,ಪ್ರಕಾಶಣ್ಣ, ಜಗದೀಶ್, ಮತ್ತು ಆಲುವಳ್ಳಿ ಗ್ರಾಮಸ್ಥರು ಇದ್ದರು.
ಗೋಶಾಲೆಗಳಿಗೆ ಹುಲ್ಲು ದಾನ ಮಾಡಲು ಇಚ್ಚಿಸಿದ್ದಲ್ಲಿ ಈ ಕೆಳಕಂಡ ದೂರವಾಣಿ ಸಂಖ್ಯೆಗೆ ಸಂಪರ್ಕಿಸಲು ಕೋರಿದೆ –
ದೇವರಾಜ್ ಕುಷನ್ – 9449175045
ರಂಜನ್ ರಾವ್ – +918197695836
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್