Breaking
12 Jan 2026, Mon

ಅಡಿಕೆ ಸಸಿಗಳನ್ನು ನಾಶಗೊಳಿಸಿದ ಅರಣ್ಯಾಧಿಕಾರಿಗಳು ,ರೈತರ ಆಕ್ರೋಶ – ಸ್ಥಳಕ್ಕೆ ಆರಗ ಜ್ಞಾನೇಂದ್ರ ಭೇಟಿ

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 ವರ್ಷಗಳಿಂದ ಸ್ವಾದೀನಾನುಭವದಲ್ಲಿ ಜಮೀನು ಸಾಗುವಳಿ ಮಾಡುತ್ತಿರುವ ರೈತರ ಜಮೀನಿನಲ್ಲಿ ಅಡಿಕೆ ಸಸಿಗಳನ್ನು ತಿಳಿವಳಿಕೆ ನೀಡದೆ ಏಕಾಏಕಿ ನಾಶಗೊಳಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿದ್ದಾರೆಂದು ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು.

ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸರ್ವೇ ನಂ 30 ರಲ್ಲಿ ಅರಣ್ಯ ಇಲಾಖೆಯವರು ಅಡಿಕೆ ಸಸಿಗಳನ್ನು ಕಿತ್ತು, ಕಡಿದು ಹಾಕಿದ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ 2015 ರಿಂದ ಸಾಗುವಳಿ ಮಾಡಿರುವ ರೈತರನ್ನು ತೆರವುಗೊಳಿಸಬಾರದಂದೆ ನಿಯಮ ಜಾರಗೊಳಿಸಲಾದರೂ ಕೂಡಾ ಅಧಿಕಾರಿಗಳು ಉಡಾಫೆಯಿಂದ ಇಂತಹ ಕೃತ್ಯದಲ್ಲಿ ತೊಡಗಿರುತ್ತಾರೆ. ಅರಣ್ಯ ರಕ್ಷಕನಿಗೆ ವರ್ಷಕ್ಕೆ ಖೇಣಿ ಕೊಡಬೇಕಂತೆ ಆತನನ್ನು ತಕ್ಷಣ ಇಲ್ಲಿಂದ ಬದಲಾವಣೆ ಮಾಡುವ ಮೂಲಕ ಅಮಾನತು ಪಡಿಸುವಂತೆ ಶಾಸಕರು ಹಿರಿಯ ಆಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚಿಸಿದರು.

ಕೊಳವಳ್ಳಿ ಸ.ನಂ. 30 ರಲ್ಲಿ ಈ ಹಿಂದೆಯೇ ನೂರಾರು ರೈತರು ಸಾಗುವಳಿ ಮಾಡಿಕೊಂಡು ಮಂಜೂರಾತಿಗೆ ಅರ್ಜಿ ಸಲ್ಲಿಸಲಾಗಿದ್ದು ಇದರಲ್ಲಿ ಎರಡ್ಮೂರು ಜನರಿಗೆ ಈ ಜಮೀನಿನಲ್ಲಿ ಸಾಗುವಳಿ ಪತ್ರವನ್ನು ನೀಡಲಾಗಿ ಉಳಿದವರು ತಮ್ಮ ತಂದೆ, ಅಜ್ಜನವರ ಕಾಲದಿಂದಲೂ ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದರೆ ಇಂತಹ ಉಡಾಫೆಯ ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯದಿಂದ ಬಡಪಾಯಿ ರೈತರು ಜಮೀನು ಇಲ್ಲದೆ ಬದುಕುವುದೇ ದುಸ್ಥರವಾಗಿದೆ ಎಂದು ಕಳವಳ ವ್ಯಕ್ತಪಡಿಸಿ, ಶಾಸನ ಸಭೆಯಲ್ಲಿ ಈ ವಿಚಾರವಾಗಿ ಚರ್ಚಿಸಿ ಅಂತಹ ಬೇಜವಾಬ್ದಾರಿ ನೌಕರನ ವಿರುದ್ದ ಕ್ರಮಕೈಗೊಳ್ಳುವಂತೆ ಆಗ್ರಹಿಸುವುದಾಗಿ ರೈತರಿಗೆ ಧೈರ್ಯ ತುಂಬಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸುರೇಶ್‌ ಸ್ವಾಮಿರಾವ್, ತಾ.ಪಂ.ಮಾಜಿ ಅಧ್ಯಕ್ಷ ವೀರೇಶ ಆಲವಳ್ಳಿ, ಗಿರೀಶ ಜಂಬಳ್ಳಿ, ಕಲ್ಲೂರು ನಾಗೇಂದ್ರ, ಗುಂಡಣ್ಣ, ವಿಶ್ವನಾಥ ಮೂಗುಡ್ತಿ, ಹುಳಿಗದ್ದೆ ದೇವು, ಗಂದ್ರಳ್ಳಿ ವಿಶ್ವನಾಥ, ಟಿ.ಡಿ. ಸೋಮಶೇಖರ, ಹೆದ್ದಾರಿಪುರ ಗ್ರಾಮ ಪಂಚಾಯಿತ್ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಸುತ್ತಮುತ್ತಲಿನ ನೂರಾರು ಗ್ರಾಮಸ್ಥರು ಹಾಜರಿದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್