Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಚಲಿಸುತಿದ್ದ ಬೈಕ್ ಗೆ ಜಿಂಕೆ ಅಡ್ಡ ಬಂದು ಅಪಘಾತ – ಸವಾರನಿಗೆ ಗಂಭೀರ ಗಾಯ

A bike rider suffered serious head injuries after a deer suddenly crossed the road near Varanahonda on Thirthahalli Road in Ripponpet. Locals allege ambulance service delay ರಿಪ್ಪನ್ ಪೇಟೆ: ಜಿಂಕೆಯೊಂದು ಏಕಾಏಕಿ ದ್ವಿಚಕ್ರ ವಾಹನದ ಮುಂದೆ ಅಡ್ಡ ಬಂದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡ ಬಳಿಯಲ್ಲಿ ನಡೆದಿದೆ. https://postmannewskannada.com/2026/03/tree-falls-on-bike-heavy-rain-ripponpet-accident.html ತಳಲೆ ಗ್ರಾಮದ ನಾಗರಾಜ್ (33) ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ…

Read More

ಭಾರಿ ಗಾಳಿ-ಮಳೆಗೆ ಬೈಕ್ ಮೇಲೆ ಉರುಳಿದ ಮರ: ಸವಾರನಿಗೆ ಗಂಭೀರ ಗಾಯ

A biker was seriously injured after a tree fell on his moving bike during heavy rain and hailstorm near Ripponpet. The victim was shifted to Shivamogga for further treatment. ರಿಪ್ಪನ್ ಪೇಟೆ: ಸೋಮವಾರ ರಾತ್ರಿ ಪಟ್ಟಣದಾದ್ಯಂತ ಸುರಿದ ಆಲಿಕಲ್ಲು ಸಹಿತ ಗುಡುಗು ಮಳೆಯಿಂದ ಹಲವು ಅನಾಹುತಗಳು ಸಂಭವಿಸಿದ್ದು, ಬಾಳೂರು ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಮರ ಉರುಳಿದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ…

Read More

ರಿಪ್ಪನ್ ಪೇಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಟಾಟಾ ಏಸ್ ಮೇಲೆ ಉರುಳಿದ ತೆಂಗಿನಮರ , ತಪ್ಪಿದ ಭಾರಿ ಅನಾಹುತ

Heavy rain with hailstorm in Ripponpete caused a coconut tree to fall on a Tata Ace vehicle in Shabarishanagara, narrowly avoiding a major tragedy; vehicle severely damaged. ರಿಪ್ಪನ್ ಪೇಟೆ: ಪಟ್ಟಣದಲ್ಲಿ ಇಂದು ಆಲಿಕಲ್ಲು, ಗುಡುಗು ಸಹಿತ ಸುರಿದ ಭಾರೀ ಮಳೆಯ ಪರಿಣಾಮವಾಗಿ ಟಾಟಾ ಏಸ್ ಲಗೇಜ್ ವಾಹನದ ಮೇಲೆ ತೆಂಗಿನಮರ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸದೇ ಭಾರಿ…

Read More

ಕಾಲೇಜು ಉಪನ್ಯಾಸಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಪ್ರತಿಭಟನೆ, ಕಠಿಣ ಕ್ರಮಕ್ಕೆ ಆಗ್ರಹ

NSUI protests in Shivamogga demanding strict action against a Sahyadri College professor accused of sexually harassing female students and sending obscene messages. ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಆಂತರಿಕ ಪರೀಕ್ಷೆಯಲ್ಲಿ ಅಂಕ ನೀಡುವ ಹೆಸರಿನಲ್ಲಿ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿರುವ ಆರೋಪದ ಮೇಲೆ ಸಹ್ಯಾದ್ರಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮುದುಕಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಆಗ್ರಹಿಸಿದೆ. ಸೋಮವಾರ ಕಾಲೇಜಿನ ಎದುರು ಪ್ರತಿಭಟನೆ…

Read More

ಮನೆ ಮುಂದೆ ನಿಲ್ಲಿಸಿದ್ದ ಆಟೋ ನಾಪತ್ತೆ; 1 ವರ್ಷದ ಬಳಿಕ ಕಂಪ್ಲೆಂಟ್ ಕೊಟ್ಟ ಮಾಲೀಕ

Passenger auto worth ₹2.44 lakh stolen from outside a house in Bommanakatte, Shivamogga; owner files police complaint after nearly one year. ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಯಾಸೆಂಜರ್ ಆಟೋವೊಂದು  ನಾಪತ್ತೆಯಾಗಿದ್ದು, ಘಟನೆ ನಡೆದು ಸುಮಾರು 1 ವರ್ಷದ ಬಳಿಕ ಮಾಲೀಕರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ. ಬೊಮ್ಮನಕಟ್ಟೆ ನಿವಾಸಿಯೊಬ್ಬರು ತಮ್ಮ ಅಳಿಯನ ಹೆಸರಿನಲ್ಲಿದ್ದ ಪ್ಯಾಸೆಂಜರ್ ಆಟೋವನ್ನು ಭದ್ರಾವತಿಯಿಂದ ತಂದು ತಮ್ಮ ಮನೆಯ ಮುಂದೆ…

Read More

ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಆಗ್ರಹ

Suspicious death of a leopard in Shikaripura after attacking a farmer raises poisoning concerns; forest officials suspect starvation while experts demand toxicology investigation. ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ತಡಸ ಗ್ರಾಮದ ನಿವಾಸಿ ರೈತ ಮುತ್ತಣ್ಣ ಸೇರಿದಂತೆ ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ ಇಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಭಾನುವಾರ ರೈತನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದ ಇದೇ ಚಿರತೆ, ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ…

Read More

ಶಿವಮೊಗ್ಗದಲ್ಲಿ ಮಾ.27ರಂದು ಉದ್ಯೋಗ ಮೇಳ: ವಿವಿಧ ಕಂಪನಿಗಳಿಂದ ನೇರ ಸಂದರ್ಶನ

District Employment Exchange Shivamogga to host job fair on March 27 with direct interviews by leading companies. Eligible candidates can attend for free. ಶಿವಮೊಗ್ಗ : ಜಿಲ್ಲೆಯಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವಾಗಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್ 27ರಂದು ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ನಡೆಯಲಿರುವ ಈ ಮೇಳದಲ್ಲಿ ಖ್ಯಾತ ಸಂಸ್ಥೆಗಳಾದ ಶಾಹಿ ಎಕ್ಸ್ಪೋರ್ಟ್, ಅಪೋಲೋ…

Read More

ಲಕ್ಕಿ ಡ್ರಾ ವಿಳಂಬ: ಶೀಘ್ರದಲ್ಲೇ ಸಾರ್ವಜನಿಕರ ಸಮ್ಮುಖದಲ್ಲಿ ಪಾರದರ್ಶಕ ಡ್ರಾ – ಕಲಾ ಕೌಸ್ತುಭ ಕನ್ನಡ ಸಂಘ ಸ್ಪಷ್ಟನೆ

Kalakaustubha Kannada Sangha clarifies delay in lucky draw event in Ripponpet, assures transparent draw to be conducted soon in presence of public and members. ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ನಿಗದಿತ ವೇಳೆಗೆ ನಡೆಯದೇ ವಿಳಂಬವಾಗಿರುವ ಕುರಿತು ಸಂಘದ ಅಧ್ಯಕ್ಷ ಮುರುಳಿಧರ್ ಕೆರೆಹಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಬಳೆಗಾರ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

Read More

ಶಿಕಾರಿಪುರದಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

Leopard attack in Shikaripura taluk of Shivamogga injures two farmers seriously, triggering panic among villagers. Forest officials set traps and urge caution. ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ ಹಾಗೂ ಮುತ್ತಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡಗಂಟಿ ಗ್ರಾಮದ ಸುದೀಪ್ ಅವರು ಸಂಜೆ ವೇಳೆ ಮುತ್ತಗಿ…

Read More

ಮಂಗನ ಕಾಯಿಲೆಗೆ ಮತ್ತೊಂದು ಬಲಿ: ತೀರ್ಥಹಳ್ಳಿ ಮೂಲದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು

A woman from Thirthahalli in Shivamogga district has died due to Kyasanur Forest Disease (KFD), marking the second death this year. Authorities report 29 cases and ongoing treatment for several patients. ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಕ್ಯಾಸನೂರು ಅರಣ್ಯ ರೋಗ (ಕೆಎಫ್‌ಡಿ) ಆತಂಕ ಹೆಚ್ಚುತ್ತಿರುವ ನಡುವೆಯೇ, ಈ ವರ್ಷ ಎರಡನೇ ಸಾವು ಸಂಭವಿಸಿರುವುದು ಜನರಲ್ಲಿ ಭೀತಿಗೆ ಕಾರಣವಾಗಿದೆ. ಅರಳಸುರುಳಿ ಸಮೀಪದ ತಟ್ಟಿಕೇವಿ ಗ್ರಾಮದ ಗುಲಾಬಿ ಶೆಟ್ಟಿ…

Read More