Headlines

ರಫ಼ಿ ರಿಪ್ಪನ್ ಪೇಟೆ

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ನಡೆದ ಬೈಕ್‌ ಕಳ್ಳತನ ಪ್ರಕರಣವನ್ನು ಪೊಲೀಸರು ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಯನ್ನು ವಶಕ್ಕೆ ಪಡೆದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 19ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕಣಬಂದೂರಿನ ವ್ಯಕ್ತಿಯೊಬ್ಬರು ಸತ್ಕಾರ ಲಾಡ್ಜ್‌ ಮುಂಭಾಗ, ರಾಧಾಕೃಷ್ಣ ಜ್ಯೂವೆಲರಿ ಪಕ್ಕದಲ್ಲಿ ಕೆಎ 14 ಇಎ 9708 ನೊಂದಣೆಯ ಹಿರೋ ಹೋಂಡಾ ಬೈಕ್ ನಿಲ್ಲಿಸಿದ್ದರು.ಸ್ವಲ್ಪ ಹೊತ್ತಿನ ನಂತರ ಮರಳಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದ್ದು, ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದೆ…

Read More

ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹುಂಚಾ : ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ, ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳ ಕೃಪಾಶೀರ್ವಾದ ಮತ್ತು ಮಾರ್ಗದರ್ಶನದಲ್ಲಿ, ಮೆಗ್ಗಾನ್‌ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಸೇರಿದಂತೆ ವಿವಿಧ ಸಾಮಾಜಿಕ ಸಂಘ‧ಸಂಸ್ಥೆಗಳ ಸಹಯೋಗದಿಂದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ನಾಳೆ (29-10-2025) ನಡೆಯಲಿದೆ. ಶಿಬಿರವು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಹುಂಚಾ ಪ್ರಾಥಮಿಕ…

Read More

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯಭಾಗವಾಗಿರುವ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್ ಶೀಘ್ರದಲ್ಲೇ ಅಗಲೀಕರಣಗೊಂಡು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ “ಮಾದರಿ ಸರ್ಕಲ್” ಆಗಿ ರೂಪಾಂತರಗೊಳ್ಳಲಿದೆ. ಈ ಸಂಬಂಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕೋಪಯೋಗಿ ಮತ್ತು ಮೆಸ್ಕಾಂ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ತಯಾರಾಗಿರುವ ನೀಲನಕ್ಷೆ (ಬ್ಲೂಪ್ರಿಂಟ್) ಅನ್ನು ಬಿಡುಗಡೆಗೊಳಿಸಿದರು. ನಂತರ ಮಾದ್ಯಮದವರೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ,“ಸರ್ಕಲ್ ವಿಸ್ತರಣೆ,…

Read More

“ಒಂದು ಕಂತು ಬಾಕಿ – ರೈತನ ಮನೆಗೆ ನುಗ್ಗಿ ಜಾನುವಾರು ಎಳೆದೊಯ್ದ ಫೈನಾನ್ಸ್ ಗೂಂಡಾಗಳು!”

“ಒಂದು ಕಂತು ಬಾಕಿ – ರೈತನ ಮನೆಗೆ ನುಗ್ಗಿ ಜಾನುವಾರು ಎಳೆದೊಯ್ದ ಫೈನಾನ್ಸ್ ಗೂಂಡಾಗಳು!” ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಫೈನಾನ್ಸ್ ಕಂಪನಿಗಳ ‘ಗುಂಡಾಗಿರಿ’ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೇವಲ ಒಂದು ತಿಂಗಳ ಕಂತು ಬಾಕಿ ಇಟ್ಟ ಕಾರಣಕ್ಕೆ ರೈತನ ಜೀವಾಳವಾದ ಜಾನುವಾರುಗಳನ್ನು ಬಲಪ್ರಯೋಗದಿಂದ ಎಳೆದೊಯ್ದಿರುವ ಗೃಹಹಲ್ಲೆಯಂತ ಘಟನೆ ಸಿದ್ಲಿಪುರದಲ್ಲಿ ನಡೆದಿದೆ. ಸಿದ್ಲಿಪುರ ಗ್ರಾಮದ ಭರತ್ ಎಂಬ ಕೃಷಿಕರು 2 ಲಕ್ಷ ರೂಪಾಯಿ ಲೋನ್ ಪಡೆದಿದ್ದರು. ನಿಯಮಿತವಾಗಿ ತಿಂಗಳಿಗೆ ₹9,000 ಕಂತು ಪಾವತಿಸುತ್ತಿದ್ದರೂ, ಹಾಲಿಡುವ ಹಸು ಅಕಾಲಿಕವಾಗಿ ಸಾವನ್ನಪ್ಪಿದ…

Read More

SSLC ಅಂಕಪಟ್ಟಿಯಲ್ಲಿ ಶಾಲೆಯ ಹೆಸರು ಗೊಂದಲ – ರಾಮಕೃಷ್ಣ ವಿದ್ಯಾಲಯದಲ್ಲಿ ಪೋಷಕರ ದಿಢೀರ್ ಪ್ರತಿಭಟನೆ

SSLC ಅಂಕಪಟ್ಟಿಯಲ್ಲಿ ಶಾಲೆಯ ಹೆಸರು ಗೊಂದಲ – ರಾಮಕೃಷ್ಣ ವಿದ್ಯಾಲಯದಲ್ಲಿ ಪೋಷಕರ ದಿಢೀರ್ ಪ್ರತಿಭಟನೆ ರಿಪ್ಪನ್‌ಪೇಟೆ : ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯಲ್ಲಿ ಶಾಲೆಯ ಹೆಸರೇ ಬದಲಾಗಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಗಂಭೀರ ಅನಾಹುತ ಉಂಟು ಮಾಡಲಿದೆ ಎಂಬ ಅಸಮಾಧಾನದಿಂದಾಗಿ, ರಿಪ್ಪನ್‌ಪೇಟೆಯ ಶಾರದಾ ರಾಮಕೃಷ್ಣ ವಿದ್ಯಾಲಯದ ವಿರುದ್ಧ ಪೋಷಕರು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಳೆದ 2024-25ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ. ಪರೀಕ್ಷಾ ಫಲಿತಾಂಶದ ಬಳಿಕ ನೀಡಲಾಗುತ್ತಿರುವ ವರ್ಗಾವಣೆ ಪತ್ರದಲ್ಲಿ ಶಾರದಾ ರಾಮಕೃಷ್ಣ ವಿದ್ಯಾಲಯದ ಬದಲು ‘ಸರ್ಕಾರಿ ಪದವಿ ಪೂರ್ವ ಕಾಲೇಜು, ರಿಪ್ಪನ್‌ಪೇಟೆ’…

Read More

RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ‌ ಮೇಲೆ ಹಲ್ಲೆ

RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ‌ ಮೇಲೆ ಹಲ್ಲೆ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಚಾಣುಕ್ಯ ಬಾರ್ ನಲ್ಲಿ ಮದ್ಯಪಾನದ ವೇಳೆ ಇಬ್ಬರ ನಡುವೆ ಉಂಟಾದ ವಾಗ್ವಾದ ಹಲ್ಲೆಗೆ ತಿರುಗಿದ್ದು ಗಲಾಟೆಯಲ್ಲಿ ಯುವಕನೊಬ್ಬನ ಎಡಭಾಗದ ಹಣೆಗೆ ಗಂಭೀರ ಗಾಯಗೊಂಡಿರುವ ಘಟನೆ ಅಕ್ಟೋಬರ್ 26ರ ರಾತ್ರಿ ಸುಮಾರು 9.30ರ ಸುಮಾರಿಗೆ ನಡೆದಿದೆ. ಪಟ್ಟಣದ ಗಾಂಧಿನಗರ ನಿವಾಸಿ ರವಿಕುಮಾರ್ ಎಂಬಾತನಿಗೆ ಗಂಭೀರ ಗಾಯಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಬನ್ನಿ…

Read More

ಕೇಬಲ್ ಕಳವು ಮಾಡುತಿದ್ದ ಇಬ್ಬರು ಆರೋಪಿಗಳು ರಿಪ್ಪನ್‌ಪೇಟೆ ಪೊಲೀಸರ ಬಲೆಗೆ

ಕೇಬಲ್ ಕಳವು ಮಾಡುತಿದ್ದ ಇಬ್ಬರು ಆರೋಪಿಗಳು ರಿಪ್ಪನ್‌ಪೇಟೆ ಪೊಲೀಸರ ಬಲೆಗೆ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ನಡೆದ ಕೇಬಲ್ ಕಳವು ಪ್ರಕರಣದಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್‌ಪೇಟೆ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಪತ್ತೆಹಚ್ಚಿ ಬಂಧಿಸಲು ಯಶಸ್ವಿಯಾಗಿದ್ದಾರೆ. ಅರಸಾಳು ಗ್ರಾಮದ ಮಂಜ ಮತ್ತು ನಾಗ ಬಂಧಿತ ಆರೋಪಿಗಳಾಗಿದ್ದಾರೆ. ಅರಸಾಳು ಗ್ರಾಮದಲ್ಲಿ ಹೊಳೆ ಬದಿಯಲ್ಲಿ ಮೋಟಾರ್ ಗಳಿಗೆ ಅಳವಡಿಸುತಿದ್ದ ಕೇಬಲ್ ಗಳನ್ನು ಕದ್ದು ಮಾರುತಿದ್ದ ಆರೋಪಿಗಳು ಅರಸಾಳು ಗ್ರಾಮದಲ್ಲಿ ಸುತ್ತಾಡುತ್ತಿದ್ದ  ಕುರಿತು ಬಂದ ಗುಪ್ತ ಮಾಹಿತಿಯ ಆಧಾರದ…

Read More

HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ

HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ ಹೊಸನಗರ: ಯೂಟ್ಯೂಬ್‌ನಲ್ಲಿ ಕಂಡ ‘ಹೆಚ್ಚು ಲಾಭಾಂಶ’ದ ಆಮಿಷ ನೀಡಿದ ಹೂಡಿಕೆ ಜಾಹೀರಾತನ್ನು ನಂಬಿ, ಹೊಸನಗರದ ಮಹಿಳೆಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು 49 ಲಕ್ಷ ರೂ.ಗೂ ಹೆಚ್ಚು ಮೊತ್ತ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ : ಮಹಿಳೆ ಯೂಟ್ಯೂಬ್ ವೀಕ್ಷಿಸುವ ವೇಳೆ ಷೇರು ಮಾರುಕಟ್ಟೆ ಮಾರ್ಗದರ್ಶನ ನೀಡುವುದಾಗಿ ಹೇಳಿಕೊಂಡಿದ್ದ ಜಾಹೀರಾತೊಂದು ತೋರ್ಪಡಿಸಿತು. ಜಾಹೀರಾತಿನ ಕೆಳಗೆ ನೀಡಿದ್ದ ವಾಟ್ಸ್‌ಆ್ಯಪ್ ಗುಂಪಿಗೆ ಸೇರುವ ಲಿಂಕ್‌ನ್ನು…

Read More

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಎರಡು ವರ್ಷದ ಬಾಲಕನೊಬ್ಬ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಶನಿವಾರ ಸಂಜೆ ನಡೆದಿದೆ. ಷಣ್ಮುಖ ಎಂಬುವವರ ಪುತ್ರ ವಿನಯ್‌ (2) ಮೃತ ದುರ್ದೈವಿ. ಮಗು ಮನೆಯ ಎದುರಿನ ರಸ್ತೆಯ ಬದಿಯಲ್ಲಿ ಆಟವಾಡುತಿದ್ದ…

Read More

15 ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆ

ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ ಸಾಗರ: ಹಲವು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆಯಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸಾಗರ ತಾಲೂಕಿನ ಯಲಗಳಲೆ ಗ್ರಾಮದ ಸಮೀಪ ರಸ್ತೆ ಬದಿಯಲ್ಲಿ ಪತ್ತೆಯಾದ ಶವವನ್ನು, ಜಂಬಗಾರು ಗ್ರಾಮದ ಹನುಮಂತಪ್ಪ (65) ಎಂದು ಗುರುತಿಸಲಾಗಿದೆ. ಹನುಮಂತಪ್ಪ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, 15 ದಿನಗಳ ಹಿಂದೆ ಕಾಣೆಯಾಗಿದ್ದಾರೆಂದು ಕುಟುಂಬದವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More