ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು

ಮಹಿಳಾ ಸಹೋದ್ಯೋಗಿನಿ ಮೇಲೆ ಬ್ಯಾಂಕ್ ಅಧಿಕಾರಿಯ ಅಸಭ್ಯ ವರ್ತನೆ – ಪ್ರಕರಣ ದಾಖಲು ಶಿವಮೊಗ್ಗ : ಬ್ಯಾಂಕಿನ ಮಹಿಳಾ ಸಿಬ್ಬಂದಿಯೊಬ್ಬರು ಅದೇ ಬ್ಯಾಂಕಿನ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ದಾಖಲಾದ ಪ್ರಕರಣವನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್‌ ಠಾಣೆ ವರ್ಗಾಯಿಸಲಾಗಿದೆ. ಬ್ಯಾಂಕ್‌ ಒಂದರ ಶಿವಮೊಗ್ಗ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಚೇರಿ ಕೆಲಸಕ್ಕೆ ಒಬ್ಬರನ್ನೇ ಕರೆಯುವುದು,…

Read More

ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಒಂದು ವರ್ಷ ಜೈಲು ಶಿಕ್ಷೆ

ಮೂರು ತಿಂಗಳ ಗರ್ಭಿಣಿ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಒಂದು ವರ್ಷ ಜೈಲು ಶಿಕ್ಷೆ ಶಿವಮೊಗ್ಗ: ಅಕ್ರಮ ಸಂಬಂಧ ಹೊಂದಿದ್ದಲ್ಲದೆ, ಗರ್ಭಿಣಿಯಾಗಿದ್ದ ತನ್ನ ಪತ್ನಿಯನ್ನು ಮನೆಯಿಂದ ಹೊರಹಾಕಿದ ಪತಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷದ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಹರೀಶ್ ಎಂಬುವವರ ವಿರುದ್ಧ ಆತನ ಪತ್ನಿ ನೀಡಿದ ದೂರಿನ ವಿಚಾರಣೆ ಪೂರ್ಣಗೊಂಡ ಬಳಿಕ, 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಅಕ್ಟೋಬರ್ 29, 2025ರಂದು ತೀರ್ಪು ನೀಡಿದೆ. ವಿವಾಹದ ಬಳಿಕ ಹರೀಶ್ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ….

Read More

ರಿಪ್ಪನ್ ಪೇಟೆ |ಕೆಲಸಕ್ಕೆ ತೆರಳಿದ್ದ ಪೋಸ್ಟ್ ಮಾಸ್ಟರ್ ನಾಪತ್ತೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಟೆತಾರಿಗ ನಿವಾಸಿಯಾದ ಸಂತೋಷ್ ಕುಮಾರ್ ಬಿನ್ ಕೇಶವ (38) ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಪೊಲೀಸರು ಮನವಿ ಸಲ್ಲಿಸಿದ್ದಾರೆ. ಸಂತೋಷ್ ಕೋಡೂರು ಪೋಸ್ಟ್ ಆಫೀಸ್ ನಲ್ಲಿ ಪೋಸ್ಟ್ ಮಾಸ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು ನ. 05 ರಂದು ಮನೆಯಿಂದ ತೆರಳಿದ್ದು ಈವರೆಗೂ ಹಿಂದಿರುಗಿರುವುದಿಲ್ಲ ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರ ಕುರಿತು ಯಾವುದೇ ಸುಳಿವು ಇದ್ದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ (ಮೊ‌:…

Read More

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ ಆನಂದಪುರ: ಇಲ್ಲಿಗೆ  ಸಮೀಪವಿರುವ ಮದ್ಲೆಸರ ನಾವಟಿ ಗ್ರಾಮದಲ್ಲಿ   ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ. ಘಟನೆಯಲ್ಲಿ ಮನೆಯು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ಲೆಸರ ನಾವಟಿ ಗ್ರಾಮದ ನಿವಾಸಿ ಜಯಮ್ಮ ಅವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ಮೇಲ್ಚಾವಣಿ ಸೇರಿದಂತೆ ಒಳಗೆ ಇದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿವೆ. ಸ್ಥಳೀಯ ಶಾಸಕರಾದ…

Read More

ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ

ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 11 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶೃಂಗೇರಿಗೆ ಆಗಮಿಸುತ್ತಿದ್ದರು. ಈ…

Read More

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್ ಶಿವಮೊಗ್ಗ : ತನ್ನ ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿ ಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಎಂಬಾತ 2018 ರಲ್ಲಿ ಮದುವೆಯಾಗಿದ್ದ ಹೆಂಡತಿಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದ. ನಂತರ ಮತ್ತೆ ಮನೆಗೆ ಬಂದಾಗ ಆಕೆಗೆ ಜೀವ ಬೆದರಿಕೆ ಹಾಕಿ ಮನೆಯಿಂದ…

Read More

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ ಶಿವಮೊಗ್ಗ : ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಲಾಗಿದ್ದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಶಾದಾಬ್ ಖಾನ್ (23) ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು, ನೆಲ್ಲೂರು ಗ್ರಾಮದ ನಿವಾಸಿ ಶಹಬಾಜ್ ಅಹ್ಮದ್(24) ಎಂಬ ಇಬ್ಬರು ಕಳ್ಳರನ್ನು ಬಂಧಿಸಿ 14 ದ್ವಿಚಕ್ರ ವಾಹನಗಳನ್ನು ಪೊಲೀಸರು…

Read More

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ಶಿವಮೊಗ್ಗ : ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್ಮಾಡಿದ್ದಕ್ಕೆ ನವದುರ್ಗ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್‌ ನಿಲ್ದಾಣದ ಸಮೀಪ ಬ್ರೆಟ್ ಹೊಟೇಲ್ ಎದುರು ಘಟನೆ ನಡೆದಿದೆ. ನವದುರ್ಗ ಬಸ್‌ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬೈಟ್ ಹೊಟೇಲ್ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್ ನಿಲ್ಲಿಸಿದ್ದರು….

Read More

RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ

RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ ರಿಪ್ಪನ್ ಪೇಟೆ : ಕುಮದ್ವತಿ ಟ್ರಾಕ್ಟರ್ ಮಾಲೀಕರು, ಚಾಲಕರು ಹಾಗೂ ಗೆಳೆಯರ ಬಳಗ ಮೂಗೂಡ್ತಿ-ತಳಲೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಥಮ ವರ್ಷದ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆ ನವೆಂಬರ್ 9, 2025, ಭಾನುವಾರ ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆಯೊಳಗಿನ ಸ್ಪರ್ಧಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ…

Read More

SHIVAMOGGA | ‘ಅಕ್ಕ ಪಡೆ’ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ

SHIVAMOGGA | ಅಕ್ಕ ಪಡೆ ತಂಡ‌‌ ರಚನೆಗೆ ಮಹಿಳೆಯರಿಂದ ಅರ್ಜಿ‌ಆಹ್ವಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ ತಂಡ ರಚನೆ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ತಂಡಕ್ಕೆ ಎನ್ ಸಿ ಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 35 ರಿಂದ 45 ವರ್ಷದೊಳಗಿನವರಾಗಿದ್ದು,…

Read More