Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896 ಶಿವಮೊಗ್ಗ : ಈ ವರ್ಷ ಸರಕು ಅಡಿಕೆ ಬೆಲೆಯು ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಇಲ್ಲಿನ ಎಪಿಎಂಸಿಯಲ್ಲಿ ಮಂಗಳವಾರ ಸರಕು (ಹಸ) ಅಡಿಕೆ ದರ ಕ್ವಿಂಟಲ್‌ಗೆ ₹98,896, ಬೆಟ್ಟೆ ಕ್ವಿಂಟಲ್‌ಗೆ ₹58,709 ಹಾಗೂ ರಾಶಿ ಅಡಿಕೆ ಕ್ವಿಂಟಲ್‌ಗೆ ₹57,059ಕ್ಕೆ ಮಾರಾಟವಾಗಿದೆ. ಎಪಿಎಂಸಿಗೆ 9 ಕ್ವಿಂಟಲ್‌ ಸರಕು ಅಡಿಕೆ, 488 ಕ್ವಿಂಟಲ್ ರಾಶಿ ಅಡಿಕೆ ಹಾಗೂ 231 ಕ್ವಿಂಟಲ್ ಗೊರಬಲು ಹಾಗೂ 26 ಕ್ವಿಂಟಲ್ ಬೆಟ್ಟೆ ಅಡಿಕೆ ಆವಕವಾಗಿತ್ತು. ಜನವರಿಯಲ್ಲಿ ಕೊಯ್ಲು…

Read More

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ ಶಿವಮೊಗ್ಗ:  ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು  ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದ ಘಟನೆ ಮಂಗಲವರ ಮುಂಜಾನೆ ನಡೆದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶ ಎದುರಾದ ಕಾರಣ , ಚೌಡೇಶ್ವರಿ ದೇವಸ್ಥಾನವನ್ನು ನಿರ್ಮಾಣ ಮಾಡಿ ದೇವರ ಮೂರ್ತಿಯನ್ನು ಪುನರ್ ಪ್ರತಿಷ್ಠಾಪನೆ ಮಡಲಾಯಿತು. ಏಕಾಏಕಿ ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಎಸ್‌ಎನ್ ಚನ್ನಬಸಪ್ಪ ಅವರು…

Read More

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ

ರಿಪ್ಪನ್ ಪೇಟೆ ಪ್ರೌಡಶಾಲೆಯಲ್ಲಿ 97-98 ನೇ ಸಾಲಿನ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ , ಗುರುವಂದನಾ ಕಾರ್ಯಕ್ರಮ ರಿಪ್ಪನ್ ಪೇಟೆ : ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ 1997 – 98 ನೇ ಸಾಲಿನ SSLC ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ನಿವೃತ ಶಿಕ್ಷಕರಾದ ಬಿ ನಾರಾಯಣಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ನಂತರ ಮಾತನಾಡಿ 28 ವರ್ಷದ ಹಿಂದೆ ನಾವು ವಿದ್ಯಾಬ್ಯಾಸ ನೀಡಿದ್ದ ವಿದ್ಯಾರ್ಥಿಗಳು ಇವತ್ತು ಇಷ್ಟು ಎತ್ತರ ಮಟ್ಟಿಗೆ…

Read More

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ –

ಚಿಣ್ಣರಿಗೆ ಪೊಲೀಸ್ ಠಾಣೆ ಪರಿಚಯ | ಮಕ್ಕಳಿಗೆ ಪಿಎಸ್ ಐ ಪ್ರವೀಣ್ ಎಸ್ ಪಿ ಪಾಠ – ರಿಪ್ಪನ್ ಪೇಟೆ : ಜನಸ್ನೇಹಿಯಾಗಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿರುವ ಪೊಲೀಸ್ ಇಲಾಖೆ ಮಕ್ಕಳಿಗೂ ಆಪ್ತವೆನಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಈ ಹಿನ್ನೆಲೆಯಲ್ಲಿ ರಿಪ್ಪನ್ ಪೇಟೆ ಠಾಣೆಯ ಪಿಎಸ್ ಐ  ಪ್ರವೀಣ್ ಎಸ್ ಪಿ ಮಕ್ಕಳಿಗೆ ಪೊಲೀಸರ ಕರ್ತವ್ಯ, ಜವಾಬ್ದಾರಿ, ಕಾನೂನು ಮತ್ತಿತರ ವಿಷಯಗಳ ಬಗ್ಗೆ ಪಾಠ ಮಾಡಿದ್ದಾರೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಕುವೆಂಪು ಸಭಾಂಗಣದಲ್ಲಿ ಮಕ್ಕಳಿಗಾಗಿ ಬೇಸಿಗೆ…

Read More

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ ಶಿವಮೊಗ್ಗ : ಕುಟುಂಬದೊಂದಿಗೆ ನವ ದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನವವಧು ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್‌ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ. ನಾಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಸುಬ್ರಹ್ಮಣ್ಯ…

Read More

ಆಪರೇಷನ್ ಸಿಂಧೂರ – ಪಾಕ್ ಪರ ಸ್ಟೇಟಸ್ ಹಾಕಿದ್ದ ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ

ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್: ವ್ಯಕ್ತಿ ಬಂಧನಕ್ಕೆ ಆಗ್ರಹ ಶಿವಮೊಗ್ಗ: ಸೋಮವಾರ  ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್‌ಎನ್ ಚನ್ನಬಸಪ್ಪ  ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು. ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ ಕಾರಣವಾಗುವುದು ಮಾತ್ರವಲ್ಲದೆ, ಸಾರ್ವಜನಿಕ ಭದ್ರತೆ ಮತ್ತು ಭಾವನೆಗಳ ವಿರುದ್ಧದ ಕೃತ್ಯವಾಗಿವೆ. ಇಂತಹ ದೇಶ ವಿರೋಧಿ ಚಟುವಟಿಕೆಗಳನ್ನು ಯಾವುದೇ ರೀತಿಯಿಂದಲೂ ಕ್ಷಮಿಸಲು ಸಾಧ್ಯವಿಲ್ಲ…

Read More

ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ

ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ ಶಿವಮೊಗ್ಗ:   ಅಬ್ಬಲಗೆರೆ ಕೃಷಿ ವಿವಿಯ ಬಳಿ ಇರುವ ಇಂಡಿಯಾ ಪಿಸ್ಟನ್  ಲಿಮಿಟೆಡ್ ಕಂಪನಿಯಲ್ಲಿ ಇಂದು ಬೆಳಿಗ್ಗೆ  ಐರನ್ ಕ್ಯಾಸ್ಟಿಂಗ್ ಮಾಡುತ್ತಿರುವಾಗ ಯಂತ್ರ ಸಿಡಿದಿದೆ. ಇದರ ಪರಿಣಾಮ 4 ಜನ ಕಾರ್ಮಿಕರ ಕಾಲಿಗೆ ಸುಟ್ಟ ಗಾಯಗಳಾಗಿವೆ. ಇಂದು ಬೆಳಿಗ್ಗೆ ಸುಮಾರು 7:30 ರ ಹೊತ್ತಿಗೆ ಫಸ್ಟ್​ ಶಿಫ್ಟ್​ನಲ್ಲಿ ಕೆಲಸಕ್ಕೆ ಕಾರ್ಮಿಕರು ಐರನ್​ ಕ್ಯಾಸ್ಟಿಂಗ್​​ ಮಾಡುತ್ತಿದ್ದರು. ಆವೇಳೆ ಯಂತ್ರ ಸಿಡಿದಿದೆ. ಇದರಿಂದ 4 ಜನ ಕಾರ್ಮಿಕರ…

Read More

ಕಾಮಿಡಿ‌ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಕುಸಿದು ಬಿದ್ದು ಸಾವು

ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ.. ರಾಕೇಶ್ ಪೂಜಾರಿ ಅವರು ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಅವರ ಹಾಸ್ಯ, ಸಹಜತೆ, ಮತ್ತು ಜನರನ್ನು ನಗಿಸುವ ವಿಶಿಷ್ಟ ಶೈಲಿಯಿಂದಾಗಿ ಎಲ್ಲರ ಮನಗೆದ್ದಿದ್ದರು. ಕಾರ್ಯಕ್ರಮದ ಸೀಸನ್-3ರಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ವಿಜೇತರಾಗಿ ಹೊರಹೊಮ್ಮಿದ್ದ ರಾಕೇಶ್, ಕಿರುತೆರೆಯ…

Read More

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ ಶರಾವತಿ ಹಾಗೂ ಇನ್ನಿತರೆ ಯೋಜನೆಗಳ ಮುಳುಗಡೆ ಸಂತ್ರಸ್ತರು ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಾಗೂ ಕಂದಾಯ ಭೂ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶುಕ್ರವಾರ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಸೊಪ್ಪಿನ ಬೆಟ್ಟ, ಕಾನು ಭೂಮಿಗಳ ಅನಧೀಕೃತ ಸಾಗುವಳಿ ಸಕ್ರಮಗೊಳಿಸುವಿಕೆ, ಹಂಗಾಮಿ ಮನೆದಳ ಪತ್ರಗಳನ್ನು ಕಾಯಂಗೊಳಿಸುವುದು, ಕಂದಾಯ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿರುವ ಸೂಚಿತ ಅರಣ್ಯ…

Read More

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ ಮೆಟ್ರೊದಲ್ಲಿ ಉದ್ಯೋಗವಕಾಶ ಬೆಂಗಳೂರಿನ ಮೆಟ್ರೊ ರೈಲು ಕಾರ್ಪೊರೇಷನ್‌ನಲ್ಲಿ 150 ಮೆಂಟೇನರ್ ಹುದ್ದೆಗಳಿಗಾಗಿ ಐ.ಟಿ.ಐ. ಅಥವಾ ಎನ್‌ಸಿವಿಟಿ/ ಎನ್‌ಸಿಟಿವಿಟಿ/ಎನ್‌ಎಸಿಗೆ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಹಾಗೂ 50 ವರ್ಷದೊಳಗಿನ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯು 5 ವರ್ಷಗಳಿಗೆ ಗುತ್ತಿಗೆ ಆಧಾರವಾಗಿದ್ದು, ನಂತರ ವೈಯಕ್ತಿಕ ಕಾರ್ಯಕ್ಷಮತೆಗೆ ಅನುಗುಣವಾಗಿ ಅವಧಿ ವಿಸ್ತರಿಸಲಾಗುವುದು. ವೇತನ ₹ 25,000ದಿಂದ ₹ 59,060 (ವಾರ್ಷಿಕ ಬಡ್ತಿ ಶೇ 3) ಮತ್ತು ಬಿಎಂಆರ್‌ಸಿಎಲ್‌ನ…

Read More