Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

ಮಹಿಳೆಯೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಸ್ವಾಮೀಜಿ: ಮಠದಿಂದಲೇ ಹೊರಹಾಕಿದ ಗ್ರಾಮಸ್ಥರು

ಮಹಿಳೆಯೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಸ್ವಾಮೀಜಿ: ಮಠದಿಂದಲೇ ಹೊರಹಾಕಿದ ಗ್ರಾಮಸ್ಥರು ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ ಅನಾಚಾರ ಆರೋಪ ಕೇಳಿಬಂದಿದೆ. ಸ್ವಾಮೀಜಿ ವಿರುದ್ದ ಅಕ್ರಮ ಸಂಬಂಧ ಆರೋಪ ಕೇಳಿ ಬಂದಿದ್ದು ಗ್ರಾಮಸ್ಥರು ಸ್ವಾಮೀಜಿಯನ್ನೇ  ಮಠದಿಂದ ಹೊರಹಾಕಿದ್ದಾರೆ. ಪ್ರಸಿದ್ದ ದೇವಸ್ಥಾನ ಎಂದು ಅಡವಿಸಿದ್ದೇಶ್ವರ ಮಠ ಹೆಸರು ವಾಸಿಯಾಗಿದ್ದು, ಅಡವಿಸಿದ್ದರಾಮ ಸ್ವಾಮೀಜಿ ಮೇಲೆ ರಾಸಲೀಲೆ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಸ್ವಾಮೀಜಿಯನ್ನು ಗ್ರಾಮಸ್ಥರು ಮಠದಿಂದ ಹೊರ ಹಾಕಿದ್ದಾರೆ. ಬಿಜಾಪುರ ಜಿಲ್ಲೆಯ ತಾಳಿಕೋಟೆಯ ಗ್ರಾಮದಿಂದ…

Read More

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ ಶಿವಮೊಗ್ಗ ನಗರದ ಹಳೆ ಬೊಮ್ಮನಕಟ್ಟೆಯ ಕೆಂಚಮ್ಮನ ದೇವಸ್ಥಾನದ ಹಿಂಬದಿಯ ಕೆರೆ ಏರಿಯ ಮೇಲೆ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಳೇಬೊಮ್ಮನಕಟ್ಟೆಯ ಶೇಖರಪ್ಪ ಎಂಬುವವರ ಪುತ್ರ ಅವಿನಾಶ್ (32) ಕೊಲೆಗೀಡಾದವ. ಅವಿನಾಶ್ 10 ವರ್ಷಗಳ ಹಿಂದೆ ನಡೆದ ರೌಡಿ ಶೀಟರ್ ತಮಿಳುಗಿರಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ನಂತರ ನ್ಯಾಯಾಲಯ ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪೆರೋಲ್ ಮೇಲೆ ಅವಿನಾಶ್ ಈಚೆಗೆ ಮನೆಗೆ ಬಂದಿದ್ದನು ಎಂದು ತಿಳಿದುಬಂದಿದೆ.ಕೊಲೆ…

Read More

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು ಸ್ನೇಹಿತನ ತೋಟದ ಮನೆಯಲ್ಲಿ ಪಾರ್ಟಿ ನಡೆಸಲು ತೆರಳಿದ್ದ ವೇಳೆ ತಾಲ್ಲೂಕಿನ ಯಡವಾಲದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಶನಿವಾರ ತಡರಾತ್ರಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯಡವಾಲ ಗ್ರಾಮದ ಕುಮಾರನಾಯ್ಜ ಅವರ ಪುತ್ರ, ಬಿ.ಕಾಂ ಓದುತ್ತಿದ್ದ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಚೌಡಮ್ಮನ ದೇವಸ್ಥಾನ ಸಮೀಪದ ನಿವಾಸಿ ವಿಜಯ್ ಅವರ ಪುತ್ರ ಚಿರಂಜೀವಿ (22) ಸಾವಿಗೀಡಾದವರು. ಸ್ನೇಹಿತ ಗೌತಮ್ ಸಹೋದರಿ…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್‌ಪೇಟೆ ಸಮೀಪದಲ್ಲಿರುವ…

Read More

ರಿಪ್ಪನ್ ಪೇಟೆ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ರಿಪ್ಪನ್ ಪೇಟೆ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಶ್ರೀ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗ ಶಿಕ್ಷಕ ನಟರಾಜ್ ನೇತ್ರತ್ವದಲ್ಲಿ ಆಚರಿಸಲಾಯಿತು. ಯೋಗ ಶಿಕ್ಷಕ ನಟರಾಜ್ ಮಾತನಾಡಿ, ಯೋಗಕ್ಕೆ ಪ್ರಾಚೀನ ಇತಿಹಾಸವಿದೆ. ದೈಹಿಕ, ಮಾನಸಿಕ ಆರೋಗ್ಯ ಮಾತ್ರವಲ್ಲದೆ ಆಧ್ಯಾತ್ಮಿಕ ಅನುಭವವನ್ನು ಯೋಗ ನೀಡುತ್ತದೆ. ಧ್ಯಾನ, ಪ್ರಾಣಾಯಾಮ ಸೇರಿದಂತೆ ಯೋಗದ ಸರಳ ಆಸನಗಳನ್ನು ಪ್ರತಿನಿತ್ಯ ಮಾಡುವುದರಿಂದ ದೇಹದಲ್ಲಿನ ಒತ್ತಡ ಕಡಿಮೆಯಾಗಿ ಮನಸ್ಸಿಗೆ ಹೆಚ್ಚು ಶಾಂತಿ, ನೆಮ್ಮದಿ ಉಂಟು ಮಾಡುತ್ತದೆ, ವ್ಯಕ್ತಿಯ…

Read More

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು ಹೊಸನಗರ : ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಮನೆಯೊಂದು ಕುಸಿತವಾಗಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸೀತಮ್ಮ ಕೋಂ ಗಿರೀಶ್ ಎಂಬುವವರ…

Read More

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು. ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ  ಸಭಾ ಸದಸ್ಯ ಟಿಪ್​…

Read More

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು ಸಾಗರ :  ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು   ವಿನಾ ಕಾರಣ ರೈತರ ಮೇಲೆ ಹಲ್ಲೆ ಮಾಡಿದರೆ ಸಹಿಸಿಕೊಂಡಿರುವುದಿಲ್ಲ. ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ…

Read More